Advertisement

‘ಅಭಿರಾಮಚಂದ್ರ’ನಿಗೆ ಸಾಥ್ ನೀಡಿದ ಶಿವಣ್ಣ

06:43 PM Apr 04, 2023 | Team Udayavani |

ಹೊಸ ತಂಡದ ಪ್ರಯತ್ನವಾಗಿ ಮೂಡಿಬಂದಿರುವ “ಅಭಿರಾಮಚಂದ್ರ’ ಚಿತ್ರದ ಟೀಸರ್‌ ಅನ್ನು ನಟ ಶಿವರಾಜ್‌ಕುಮಾರ್‌ ನೋಡಿ, ಮೆಚ್ಚುಗೆ ಸೂಚಿಸಿದ್ದಾರೆ. ಈ ಮೂಲಕ ಚಿತ್ರತಂಡ ಖುಷಿಯಾಗಿದೆ.

Advertisement

ಶಾಲಾ ದಿನಗಳ ಪ್ರೀತಿ, ತುಂಟಾಟ, ಸ್ನೇಹದ ಸುಂದರ ನೋಟ ಅಭಿರಾಮಚಂದ್ರ ಟೀಸರ್‌ನಲ್ಲಿ ಸೇರಿಕೊಂಡಿದೆ. ನಾಗೇಂದ್ರ ಗಾಣಿಗ ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾ. ರಥ ಕಿರಣ, ಸಿದ್ದು ಮೂಲಿಮನಿ, ನಾಟ್ಯರಂಗ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಾನಿ ರೈ ನಾಯಕಿ ಆಗಿ ಅಭಿನಯಿಸಿದ್ದಾರೆ.

ಕುಂದಾಪುರ, ಬೆಂಗಳೂರು, ಮೈಸೂರು ಭಾಗದಲ್ಲಿ ಶೂಟಿಂಗ್‌ ನಡೆಸಲಾಗಿದ್ದು, ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಸಿನಿಮಾಕ್ಕಿದೆ. ವೀಣಾ ಸುಂದರ್‌, ಸುಂದರ್‌, ಎಸ್‌.ನಾರಾಯಣ್, ಪ್ರಕಾಶ್‌ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಚಿತ್ರಕ್ಕೆ ಸಂದೀಪ್‌ ವಲ್ಲೂರಿ ಛಾಯಾಗ್ರಹಣ, ಸುರೇಶ್‌ ಆರುಮುಗಂ ಸಂಕಲನವಿದೆ. ಅಭಿರಾಮಚಂದ್ರ ಸಿನಿಮಾ ಮೇ ತಿಂಗಳಲ್ಲಿ ತೆರೆಗೆ ಬರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next