Advertisement

ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆ ಹತ್ಯೆ

02:03 PM Dec 31, 2020 | Team Udayavani |

ಬೆಳಗಾವಿ: ಜಿಲ್ಲಾಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿದ್ದ ಮಹಿಳೆಯನ್ನು ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ.

Advertisement

ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಹಡಪದ ಎಂಬ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಈಕೆಯ ಪರಿಚಯಸ್ಥ, ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾದ ಬೈಲಹೊಂಗಲದ ಆಶ್ರಯ ಕಾಲೋನಿ ನಿವಾಸಿ ಈರಣ್ಣ ಬಾಬು ಜಗಜಂಪಿ ಕೊಲೆ ಮಾಡಿದ್ದಾನೆ.

ಕೂಡಲೇ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾಸ್ಪತ್ರೆಯ ಕ್ಯಾಂಟೀನ್‌ ಬಳಿ ಸೆಕ್ಯುರಿಟಿ ಗಾರ್ಡ್‌ ಕೆಲಸ ಮಾಡುತ್ತಿದ್ದ ಸುಧಾರಾಣಿ ಹಡಪದ ಮೇಲೆ ಈರಣ್ಣ ಏಕಾಏಕಿ ದಾಳಿ ನಡೆಸಿ ಕೊಚ್ಚಿ ಹತ್ಯೆ ಮಾಡಿದ್ದಾನೆ.

ಇದನ್ನೂ ಓದಿ:ಮೈಮರೆತ ಜನತೆ; ಪೊಲೀಸರಿಂದ ಲಾಠಿ ಏಟಿನ ರುಚಿ

ಸುಧಾರಾಣಿ ಹಡಪದ ಗಂಡನನ್ನು ಬಿಟ್ಟು ಸುಮಾರು ಮೂರು ವರ್ಷಗಳಿಂದ ಈರಣ್ಣನೊಂದಿಗೆ ಪ್ರೀತಿ ಮಾಡಿ ಸಂಬಂಧ ಇಟ್ಟುಕೊಂಡಿದ್ದಳು. ಕೆಲ ದಿನಗಳಿಂದ ಈರಣ್ಣನನ್ನು ನಿರಾಕರಣೆ ಮಾಡಿ ಬೇರೆ ವ್ಯಕ್ತಿಯೊಂದಿಗೆ ಪ್ರೀತಿ ಮಾಡುತ್ತಿದ್ದಳು ಎಂದು ಸಂಶಯಪಟ್ಟು ಆಗಾಗ ಈಕೆಯೊಂದಿಗೆ ಜಗಳವಾಡುತ್ತಿದ್ದನು. ಅನೇಕ ಸಲ ಬುದ್ಧಿವಾದ ಹೇಳಿದರೂ ಕೇಳಿರಲಿಲ್ಲ. ಹೀಗಾಗಿ ಬುಧವಾರ ಬಂದು ಮಾರಕಾಸ್ತ್ರದಿಂದ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಸ್ಥಳಕ್ಕೆ ಡಿಸಿಪಿ ಸಿ.ಆರ್‌. ನೀಲಗಾರ, ಮಾರ್ಕೆಟ್‌ ಎಸಿಪಿ ಸದಾಶಿವ ಕಟ್ಟಿಮನಿ, ಎಪಿಎಂಸಿ ಇನ್ಸ್‌ಪೆಕ್ಟರ್‌ ಜಾವೇದ ಮುಶಾಪುರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next