Advertisement

ಹರ್ಷ ಹತ್ಯೆ ಬಗ್ಗೆ ಹೇಳಿಕೆ: ಎಂಎಲ್‌ಸಿಡಿ.ಎಸ್‌. ಅರುಣ್‌ಗೆ ಜೀವ ಬೆದರಿಕೆ

09:54 PM Mar 09, 2022 | Team Udayavani |

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ.

Advertisement

ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಫೆ.21ರಂದು ಅವರಿಗೆ ಬೆದರಿಕೆ ಕರೆ ಬಂದಿದೆ.

ಮುಸ್ತಾಕ್‌ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶ ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ. ನಿಮ್ಮ ತಲೆಲಿ ಇವತ್ತು ಕೇವಲ ಒಬ್ಬ ಹಿಂದೂ ಕಾರ್ಯಕರ್ತ ಸತ್ತಿದ್ದಾನೆ ಅಷ್ಟೆ. ಆದರೆ ಮುಂದಿನ ದಿನ ನಿಮ್ಮ ಹೆಂಡಿರು ಮಕ್ಕಳೇ ನಮ್ಮ ಟಾರ್ಗೆಟ್‌. ನೆನಪಿಡಿ ಷಂಡ ಸರ್ಕಾರದ ಭಂಡರಂತೆ ವರ್ತಿಸುವ ಪ್ರಚಂಡರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಒಡ್ಡಲಾಗಿದೆ.

ಪ್ರಕರಣ ಸಂಬಂಧ ಡಿ.ಎಸ್‌.ಅರುಣ್‌ ಅವರ ಆಪ್ತ ಸಹಾಯಕ ವಾಗೀಶ್‌ ಅವರು ಜಿಲ್ಲಾ ರಕ್ಷಣಾಧಿ ಕಾರಿಗೆ ದೂರು ನೀಡಿದ್ದು, ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಶಿವಮೊಗ್ಗದ ಸಿಇಎನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ನನಗೆ ಯಾವುದೇ ರಾಹುಕಾಲ, ಗುಳಿಕ ಕಾಲವಿಲ್ಲ: ರೇವಣ್ಣ

Advertisement
Advertisement

Udayavani is now on Telegram. Click here to join our channel and stay updated with the latest news.

Next