Advertisement

ಬಸವಸಾಗರದಿಂದ ಕೃಷ್ಣಾ ನದಿಗೆ 1.28 ಲಕ್ಷ ಕ್ಯೂಸೆಕ್‌ ನೀರು

05:57 PM Aug 18, 2022 | Team Udayavani |

ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ನಿರಂತರ ಒಳಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಕೃಷ್ಣಾ ನದಿಗೆ 1.28 ಲಕ್ಷ ಕ್ಯೂಸೆಕ್‌ನಷ್ಟು ನೀರನ್ನು ಹರಿಸಲಾಗುತ್ತಿದೆ. ಕೃಷ್ಣಾ ನದಿ ಜಲಾನಯನ ಪ್ರದೇಶಗಳಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ನದಿಗಳಲ್ಲಿ ನೀರಿನ ಹರಿವು ಇದ್ದು, ಹೀಗಾಗಿ ಆಲಮಟ್ಟಿ ಶಾಸ್ತ್ರೀ ಸಾಗರದಿಂದ ಬಸವಸಾಗರಕ್ಕೆ ಬರುವ ಒಳಹರಿವು ಮಂಗಳವಾರ ಬೆಳಗ್ಗೆ 1.50 ಲಕ್ಷ ಕ್ಯೂಸೆಕ್‌ನಷ್ಟಿತ್ತು. ಸಂಜೆ 1.25 ಲಕ್ಷಕ್ಕೆ ಇಳಿಕೆಯಾಗಿ, ಬುಧವಾರ ಬೆಳಗ್ಗೆ ಒಳಹರಿವು ಯಥಾಸ್ಥಿತಿ ಕಾಯ್ದುಕೊಂಡಿದೆ.

Advertisement

ಪ್ರಸ್ತುತ ಜಲಾಶಯದ 14 ಕ್ರಸ್ಟ್‌ ಗೇಟ್‌ಗಳನ್ನು ತೆರೆದು 1.22 ಲಕ್ಷ ಕ್ಯೂಸೆಕ್‌ ಹಾಗೂ ಮುರಡೇಶ್ವರ ಜಲವಿದ್ಯುತ್‌ ಸ್ಥಾವರ ಮೂಲಕ ಆರು ಸಾವಿರ ಒಟ್ಟು 1.28 ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಸದ್ಯ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಬಸವಸಾಗರಕ್ಕೆ ಬರುವ ಒಳಹರಿವನ್ನು ಗಮನಿಸಿ ಕೃಷ್ಣಾ ನದಿಗೆ ನೀರು ಹರಿಸಲಾಗುತಿದೆ. ಒಂದೊಮ್ಮೆ ಜಲಾಶಯಕ್ಕೆ ಬರುವ ಒಳಹರಿವು ಹೆಚ್ಚಾದರೆ ನದಿಗೆ ನೀರು ಹರಿಸುವ ಪ್ರಮಾಣ ಹೆಚ್ಚಾಗಲಿದೆ.

ಕಡಿಮೆಗೊಂಡರೆ ನದಿಗೆ ನೀರು ಹರಿಸುವುದು ಕಡಿಮೆಯಾಗುವ ಸಾಧ್ಯತೆ ಇದೆ. ನದಿಯಲ್ಲಿ ನೀರಿನ ಹರಿವು ಏರಿಳಿತವಾಗುತ್ತಿದೆ. ನದಿ ತೀರದ ಗ್ರಾಮಗಳ ಜನ ಜಾನುವಾರುಗಳು ಮುಂಜಾಗ್ರತಾ ಕ್ರಮವಾಗಿ ನದಿಗೆ ಇಳಿಯದಂತೆ ಎಚ್ಚರ ವಹಿಸಬೇಕು ಎಂದು ಅಣೆಕಟ್ಟು ಅಧಿಕಾರಿಗಳು ಮನವಿ ಮಾಡಿದ್ದಾರೆ. ಜಲಾಶಯದ ಗರಿಷ್ಠ 492.25ಮೀ. ಎತ್ತರದಲ್ಲಿ ಬುಧವಾರ 491.71 ಮೀ. ನೀರಿದ್ದು, ಗರಿಷ್ಠ ಸಂಗ್ರಹ 33.31 ಟಿಎಂಸಿ ಅಡಿಗಳಲ್ಲಿ 30.83 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಒಳಹರಿವು 1.25 ಲಕ್ಷ ಕ್ಯೂಸೆಕ್‌ ಇದ್ದರೆ, ಹೊರ ಹರಿವು 1.28 ಲಕ್ಷ ಕ್ಯೂಸೆಕ್‌ ಇದೆ.

Advertisement

Udayavani is now on Telegram. Click here to join our channel and stay updated with the latest news.

Next