Advertisement

KSRTC ಬಸ್‌ನಲ್ಲಿ ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 1.95 ಲಕ್ಷ ರೂ. ನಗದು ವಶ

09:11 PM Apr 23, 2023 | Team Udayavani |

ಕುಷ್ಟಗಿ:ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಹೆದ್ದಾರಿ ವಿಧಾನಸಭೆ ಚುನಾವಣೆಯ ಸ್ಥಿರ ಚಕ್ ಪೋಸ್ಟ್ ನಲ್ಲಿ ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 1.95 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಕ್ಯಾದಿಗುಪ್ಪ ಹೆದ್ದಾರಿ ಕ್ರಾಸ್ ನಲ್ಲಿ ಚಕ್ ಪೋಸ್ಟ್ ಸಿಬ್ಬಂದಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸಪೇಟೆ ಘಟಕದ ಬಸ್ ನ್ನು (ಕೆಎ-37 ಎಫ್-0324) ತಡೆದು ತಪಾಸಣೆ ನಡೆಸಿದ್ದರು. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಎಸ್ ಪಿಸಿ ಇನ್ಫ್ರಾ ಕಂಪನಿಯ ಮೇಲ್ವಿಚಾರಕ, ಶ್ರೀಕಾಕುಲಮ್ ಮೂಲದ ಶ್ರೀನಿವಾಸ ಅಪ್ಪರಾವ್ ಬಳಿ ಈ ಮೊತ್ತ ಪತ್ತೆಯಾಗಿದೆ. 1.95 ಲಕ್ಷ ರೂ. ಮೊತ್ತಕ್ಕೆ ಯಾವೂದೇ ದಾಖಲೆ ಇರಲಿಲ್ಲ, ಈ ಹಿನ್ನೆಲೆಯಲ್ಲಿ ನಗದು ಸೇರಿದಂತೆ ಸದರಿ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Karnataka Election ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ ತೆರೆದೆ: ರಾಹುಲ್

Advertisement

Udayavani is now on Telegram. Click here to join our channel and stay updated with the latest news.

Next