ಬಿಷ್ಣುಪುರ್: ಮಣಿಪುರದ ಟ್ರೋಂಗ್ಲಾಬಿ ಬಿಷ್ಣುಪುರ್ ಜಿಲ್ಲೆಯಲ್ಲಿ ಗುರುವಾರ ಹಿಂಸಾಚಾರದ ಹೊಸ ಘಟನೆ ವರದಿಯಾಗಿದೆ. ಕೆಲವು ದುಷ್ಕರ್ಮಿಗಳ ನಡುವಿನ ಗುಂಡಿನ ಕಾಳಗದಲ್ಲಿ ಒಬ್ಬ ಪೊಲೀಸ್ ಕಮಾಂಡೋ ಹುತಾತ್ಮರಾಗಿದ್ದಾರೆ. ಹಿರೇನ್ ಎಂದು ಗುರುತಿಸಲಾಗಿದ್ದು, ಐವರು ಗಾಯಗೊಂಡಿದ್ದಾರೆ.
ದಾಳಿಯ ಹಿಂದೆ ಉಗ್ರಗಾಮಿ ಸಂಘಟನೆಗಳ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕೆಲ ದುಷ್ಕರ್ಮಿಗಳು ರಾಜ್ಯ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಕೆಲವು ದುಷ್ಕರ್ಮಿಗಳು ಬೆಟ್ಟ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಮಣಿಪುರ ರಾಜ್ಯ ಪೊಲೀಸ್ ಕಮಾಂಡೋಗಳು ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದಾಗ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ.
ಮಣಿಪುರದಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ನಡೆದ ಎರಡನೇ ಘಟನೆ ಇದಾಗಿದೆ.ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಕೆಲವು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅರೆಸೇನಾ ಪಡೆಯ ಮೇಲೆ ಗುಂಡು ಹಾರಿಸಿದಾಗ ಅಸ್ಸಾಂ ರೈಫಲ್ಸ್ ಜವಾನ ಗಾಯಗೊಂಡ ನಂತರ ಈ ದಾಳಿ ನಡೆದಿದೆ.