Advertisement

West Bengal;ನಾಡ ಬಾಂಬ್ ಸ್ಫೋಟ; ವ್ಯಕ್ತಿ ಸಾವು, 3 ಮಂದಿಗೆ ಗಾಯ

08:33 PM Jun 24, 2023 | Team Udayavani |

ಕೋಲ್ಕತ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಶನಿವಾರ 2 ಪ್ರತ್ಯೇಕ ಘಟನೆಗಳಲ್ಲಿ ನಾಡ ಬಾಂಬ್ ಸ್ಫೋಟಗೊಂಡಿದೆ.

Advertisement

ದುರಂತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟು, ಮೂವರು ಗಾಯಗೊಂಡಿರುವುದು ವರದಿಯಾಗಿದೆ. ರೌಡಿ ಶೀಟರ್‌ ಅಲಿಮ್‌ ಶೇಕ್‌ ಎಂಬಾತ ಮಾವಿನ ತೋಟದಲ್ಲಿ ನಾಡ ಬಾಂಬ್ ಸಿಡಿದ ಹಿನ್ನೆಲೆಯಲ್ಲಿ ತೀವ್ರಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮತ್ತೊಂದೆಡೆ ತೃಣಮೂಲ ಕಾಂಗ್ರೆಸ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮುರ್ಷಿದಾಬಾದ್‌ನಲ್ಲಿ ಹೊಡೆದಾಟ ನಡೆದಿದ್ದು, ಈ ವೇಳೆ ನಾಡಬಾಂಬು ಸ್ಫೋಟಿಸಿದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ನಾಡ ಬಾಂಬುಗಳ ತಯಾರಿಕೆ ಮತ್ತು ಬಳಕೆ ಹೆಚ್ಚಿದ್ದು, ವಿಪಕ್ಷಗಳನ್ನು ಹತ್ತಿಕ್ಕಲು ಆಡಳಿತಾರೂಢ ಟಿಎಂಸಿ ಇದಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್‌ ಆರೋಪಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next