Advertisement

Bihar: ಆರ್‌ ಜೆಡಿ ನಾಯಕ ತೇಜಸ್ವಿ ಯಾದವ್‌ ಬೆಂಗಾವಲು ವಾಹನ ಅಪಘಾತ; ಓರ್ವ ಮೃತ್ಯು

10:34 AM Feb 27, 2024 | Team Udayavani |

ಪಾಟ್ನಾ: ಆರ್‌ ಜೆಡಿ ನಾಯಕ ತೇಜಸ್ವಿ ಯಾದವ್‌ ಅವರ ಬೆಂಗಾವಲು ವಾಹನ ನಿಯಂತ್ರಣ ತಪ್ಪಿ ಮತ್ತೊಂದು ವಾಹನಕ್ಕೆ ಢಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಮಂಗಳವಾರ(ಫೆ.27 ರಂದು) ನಡೆದಿದೆ.

Advertisement

ಬಿಲೋರಿ ಪನೋರಮಾ ಹೈಟ್ಸ್ ವಸತಿ ಸಮುಚ್ಚಯದ ಬಳಿ ಈ ಅಪಘಾತ ಸಂಭವಿಸಿದೆ. ಆರ್‌ಜೆಡಿ ನಾಯಕ ಬೆಂಗಾವಲು ಪಡೆಯಲ್ಲಿ ಇದ್ದಾರ ಇಲ್ವೋ ಎನ್ನುವುದರ ಬಗ್ಗೆ ಇದುವರೆಗೆ ಸ್ಪಷ್ಟನೆ ಸಿಕ್ಕಿಲ್ಲ.

ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಬದಿಯ ಮತ್ತೊಂದು ಕಡೆಯಿಂದ ಬರುತ್ತಿದ್ದ ವಾಹನಕ್ಕ ಢಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಬೆಂಗಾವಲು ವಾಹನದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಮೂವರಿಗೆ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next