ಪುಲ್ವಾಮ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದ್ದು ಮೂವರು ಉಗ್ರರನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ. ಆದರೇ ಕಾರ್ಯಾಚರಣೆಯಲ್ಲಿ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ.
ಇಂದು ಮುಂಜಾನೆ ಎನ್ ಕೌಂಟರ್ ನಡೆದಿದ್ದು ಸ್ಥಳದಿಂದ ಒಂದು ಏಕೆ 47 ರೈಫಲ್ಸ್ ಮತ್ತು 2 ಪಿಸ್ತೂಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆ ವೇಳೆ ಓರ್ವ ಯೋಧ ಗಂಭೀರ ಗಾಯಗೊಂಡಿದ್ದು, ಸೇನಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಮದುವರೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಪೊಲೀಸ್ ಮೂಲಗಳ ಪ್ರಕಾರ, ಇಂದು ಮುಂಜಾನೆಯಿಂದಲೇ ಪುಲ್ವಾಮದ ಜದೂರ ಪ್ರದೇಶದಲ್ಲಿ ಎನ್ ಕೌಂಟರ್ ಆರಂಭವಾಗಿದೆ. ಮೂವರು ಉಗ್ರರನ್ನು ಈಗಾಗಲೇ ಹತ್ಯೆ ಮಾಡಲಾಗಿದ್ದು ಇನ್ನು ಹೆಚ್ಚಿನ ಉಗ್ರರು ಅಡಗಿರುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ಶೋಪಿಯಾನ್ ಕಾರ್ಯಾಚರಣೆ; ಭದ್ರತಾ ಪಡೆ ಎನ್ ಕೌಂಟರ್ ಗೆ ನಾಲ್ವರು ಉಗ್ರರ ಸಾವು
ಶುಕ್ರವಾರ (ಆಗಸ್ಟ್ 28, 2020) ಭದ್ರತಾ ಪಡೆಯ ಎನ್ ಕೌಂಟರ್ ಗೆ ನಾಲ್ವರು ಉಗ್ರರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ. ಶೋಪಿಯಾನದ ಕಿಲೂರಾ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರು ಬಲಿಯಾಗಿರುವುದನ್ನು ಜಮ್ಮು-ಕಾಶ್ಮೀರ ಪೊಲೀಸರು ಖಚಿತಪಡಿಸಿದ್ದಾರೆ.