Advertisement

ಸಿಎಂ ಪರಿಹಾರ ನಿಧಿಗೆ 10 ಕೋಟಿ ದೇಣಿಗೆ; ಇನ್ಫೋಸಿಸ್ ಸುಧಾಮೂರ್ತಿಗೆ ಮೆಚ್ಚುಗೆಯ ಸುರಿಮಳೆ

09:49 AM Aug 10, 2019 | Nagendra Trasi |

ಬೆಂಗಳೂರು:ರಾಜ್ಯದಲ್ಲಿ ಪ್ರವಾಹ ಪೀಡಿತ ಜನರಿಗೆ ಪುನರ್ವಸತಿ ಕಲ್ಪಿಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ 10 ಕೋಟಿ ರೂಪಾಯಿ ನೀಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸುಧಾಮೂರ್ತಿಯವರ ಜನಪರ ಕಾಳಜಿಗೆ ಭರ್ಜರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Advertisement

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಉಂಟಾಗಿರುವ ಹಾನಿಗೆ ಪರಿಹಾರ ನೀಡಲು ಸದ್ಯಕ್ಕೆ ಅಂದಾಜು 5 ಸಾವಿರ ಕೋಟಿ ರೂಪಾಯಿ ಅಗತ್ಯವಿದೆ. ಸುಮಾರು 30ಸಾವಿರ ಮನೆಗಳನ್ನು ನಿರ್ಮಿಸಬೇಕಿದೆ. ಇದಕ್ಕೆ ದಾನಿಗಳು ನೆರವು ನೀಡಿ ಸಹಾಯ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿನ್ನೆ ಮನವಿ ಮಾಡಿಕೊಂಡಿದ್ದರು.

ಅಲ್ಲದೇ ಸುದ್ದಿಗೋಷ್ಠಿಯಲ್ಲಿ ಪ್ರವಾಹ ಪೀಡಿತ ಜನರಿಗೆ ಪುನರ್ವಸತಿ ಕಲ್ಪಿಸಲು 10 ಕೋಟಿ ನೆರವು ನೀಡಿರುವ ಇನ್ಫೋಸಿಸ್ ನ ಸುಧಾಮೂರ್ತಿಯವರಿಗೆ ಧನ್ಯವಾದ ಅರ್ಪಿಸುವುದಾಗಿ ಯಡಿಯೂರಪ್ಪ ಹೇಳಿದ್ದರು.

ಇದೀಗ ಉತ್ತರ ಕರ್ನಾಟಕ ಪ್ರವಾಹ ಪೀಡಿತರಿಗೆ ಪುನರ್ವಸತಿ ಕಲ್ಪಿಸಲು ಸುಧಾಮೂರ್ತಿ ಸಿಎಂ ಪರಿಹಾರ ನಿಧಿಗೆ 10 ಕೋಟಿ ರೂಪಾಯಿ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಮತ್ತೊಂದೆಡೆ ಕನ್ನಡ ಚಿತ್ರರಂಗದ ಸ್ಟಾರ ನಟರು ಕೂಡಾ ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಾಗುವಂತೆ ಮನವಿ ಮಾಡಿಕೊಂಡಿದ್ದಾರೆ. ಜತೆಗೆ ತಾವೂ ಕೂಡಾ ಕೈಜೋಡಿಸುವುದಾಗಿ ಹೇಳಿಕೆ ಕೊಟ್ಟಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next