Advertisement

ಜೋಗದ ಅಭಿವೃದ್ಧಿಗೆ 10 ಕೋಟಿ ರೂ. ಬಿಡುಗಡೆ: ರಾಘವೇಂದ್ರ

08:36 AM May 18, 2020 | Sriram |

ಶಿವಮೊಗ್ಗ: ಜೋಗದಲ್ಲಿ ಕೈಗೊಳ್ಳಬಹುದಾದ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಸರಕಾರ ಈಗಾಗಲೇ 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಈ ಸಂಬಂಧ ಟೆಂಡರ್‌ ಪ್ರಕ್ರಿಯೆ ನಡೆದು ಶೀಘ್ರದಲ್ಲಿ ಈ ಎಲ್ಲ ಕಾಮಗಾರಿಗಳು ತಯಾರಿಸಲಾಗಿರುವ ಕ್ರಿಯಾ ಯೋಜನೆಯಂತೆ ತ್ವರಿತವಾಗಿ ನಡೆಯಲಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದರು.

Advertisement

ಸಾಗರ ತಾಲೂಕಿನ ಜೋಗ ಜಲಪಾತದಲ್ಲಿ ಕೆಪಿಸಿ ಪ್ರವಾಸಿ ಮಂದಿರದಿಂದ ರಾಣಿ ಫಾಲ್ಸ್‌ವರೆಗೆ ನಿರ್ಮಿಸಲು ಉದ್ದೇಶಿಸಿರುವ 80 ಲಕ್ಷ ರೂ. ವೆಚ್ಚದ ವಿಶೇಷ ವಿನ್ಯಾಸದ ಜಿಪ್‌ಲೈನ್‌ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಕಾಮಗಾರಿಗೆ ಸರಕಾರವು ಈಗಾಗಲೇ 40 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ. ಸಾಹಸ ಮತ್ತು ಕ್ರೀಡಾ ಪ್ರಿಯರಿಗೆ ಮೆಚ್ಚುಗೆಯಾಗಬಹುದಾದ ದೇಶದ ಮಾದರಿ ಜಿಪ್‌ಲೈನ್‌ ಇದಾಗಿದ್ದು, ಇಂತಹ ಭೌಗೋಳಿಕ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜ್ಯದ ಮೊದಲ ಪ್ರವಾಸಿ ತಾಣ ಇದಾಗಿರಲಿದೆ ಎಂದು ಸಂಸದರು ಹೇಳಿದರು.

ಎರಡು ಸ್ಥಾವರ
ಜಿಪ್‌ಲೈನ್‌ನಲ್ಲಿ ಸುರಕ್ಷತೆಯ ದೃಷ್ಟಿಯಿಂದ 2 ಕೇಬಲ್‌ಗ‌ಳನ್ನು ಅಳವಡಿಸುತ್ತಿದ್ದು, ಗುರುತ್ವಾಕರ್ಷಣೆ ಬಲದ ಮೇಲೆ ಇಬ್ಬರು ವ್ಯಕ್ತಿಗಳು ಏಕಕಾಲದಲ್ಲಿ ಒಂದು ಬದಿಯಿಂದ ಇನ್ನೊಂದು ಬದಿಗೆ ಸುಮಾರು 450 ಮೀ. ದೂರದವರೆಗೆ ಸಾಗಬಹುದಾಗಿದೆ. ಜಿಪ್‌ಲೈನ್‌ನ ಒಂದು ಕಡೆಗೆ 48 ಅಡಿ ಹಾಗೂ ಇನ್ನೊಂದು ಕಡೆಗೆ 16 ಅಡಿ ಎತ್ತರದ ಎರಡು ಸ್ಥಾವರಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಅರಣ್ಯ ಇಲಾಖೆಯ ಸಹಯೋಗದಲ್ಲಿ ಮೈಸೂರಿನ ಬಟರ್‌ ಫ್ಲೆ çಪಾರ್ಕ್‌ ಮಾದರಿಯಲ್ಲಿ ಜೈವಿಕ ಉದ್ಯಾನವನ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಗಾಜನೂರಿನಲ್ಲಿ ಅರಣ್ಯ ಇಲಾಖೆಯ ಮೂರು ಎಕರೆ ಜಾಗದಲ್ಲಿ ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿ ಕಾರದ 10 ಕೋಟಿ ಅನುದಾನ ಬಳಸಿಕೊಂಡು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದರು.

Advertisement

ಶಾಸಕ ಎಚ್‌. ಹಾಲಪ್ಪ ಹರತಾಳು, ಜಿಲ್ಲಾ ಧಿಕಾರಿ ಶಿವಕುಮಾರ್‌, ಸಹಾಯಕ ಆಯುಕ್ತ ಡಾ| ನಾಗರಾಜ್‌ ಎಲ್‌., ತಹಶೀಲ್ದಾರ್‌ ಚಂದ್ರಶೇಖರ್‌ ನಾಯ್ಕ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next