Advertisement

Rain Update: ಕರಾವಳಿಯಲ್ಲಿ 10 ದಿನ ಭಾರೀ ಮಳೆ ಸಾಧ್ಯತೆ: KSNDMC ಮುನ್ನೆಚ್ಚರಿಕೆ

11:14 PM Jun 28, 2023 | Team Udayavani |

ಮಂಗಳೂರು/ಉಡುಪಿ: ಮುಂಗಾರು ಬಿರುಸು ಪಡೆದುಕೊಂಡಿದ್ದು, ಕರಾವಳಿ ಭಾಗದ ಹಲವು ಕಡೆಗಳಲ್ಲಿ ಬುಧವಾರ ಉತ್ತಮ ಮಳೆಯಾಗಿದೆ.

Advertisement

ಮಂಗಳೂರು ನಗರದಲ್ಲಿ ಬೆಳಗ್ಗೆ ಮಳೆಯಾಗಿತ್ತು. ಬಳಿಕ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗಿದ್ದು, ಮೋಡದಿಂದ ಕೂಡಿದ ವಾತಾವರಣ ಇತ್ತು. ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಬುಧವಾರ ಕೆಲವೆಡೆ ಉತ್ತಮ ಮಳೆಯಾಗಿದ್ದು, ಕಾಪು, ಹೆಬ್ರಿ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಶಂಕರನಾರಾಯಣ, ಕಾಪು, ಬೆಳ್ಮಣ್‌, ಅಜೆಕಾರು, ಕುಂದಾಪುರ, ಪರ್ಕಳ, ಸಿದ್ದಾಪುರ, ಪಡುಬಿದ್ರಿ, ಬೈಂದೂರು, ಮಲ್ಪೆ, ಮಣಿಪಾಲ ಭಾಗದಲ್ಲಿ ಬಿಟ್ಟುಬಿಟ್ಟು ಮಳೆ ಸುರಿದಿದೆ. ಮಂಗಳವಾರ ತಡರಾತ್ರಿಯಿಂದ ಬುಧವಾರ ಮುಂಜಾನೆ ವರೆಗೆ ಹಲವೆಡೆ ಧಾರಾಕಾರ ಮಳೆ ಸುರಿದಿದೆ.

ಮುಂಗಾರು ಬಿರುಸು ಪಡೆಯುವ ಸಾಧ್ಯತೆ ಇದ್ದು, ಮುಂದಿನ ಹತ್ತು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ನೆಚ್ಚರಿಕೆ ನೀಡಿದೆ.

ಜುಲೈ 2ರಿಂದ ಮಳೆ ಮತ್ತಷ್ಟು ಬಿರುಸು ಪಡೆಯುವ ನಿರೀಕ್ಷೆ ಇದೆ. ಕರಾವಳಿಯಲ್ಲಿ 40ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ಸಮುದ್ರಕ್ಕೆ ಇಳಿಯಬಾರದು. ತಗ್ಗು ಪ್ರದೇಶದ ಜನರನ್ನು ಸ್ಥಳಾಂತರಿಸಬೇಕಾದ ಆವಶ್ಯಕತೆಯನ್ನು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.

ಇಂದು ಆರೆಂಜ್‌ ಅಲರ್ಟ್‌
ರಾಜ್ಯ ಕರಾವಳಿ ಭಾಗದಲ್ಲಿ ಜೂ. 29ರ ಬೆಳಗ್ಗೆ 8.30ರ ವರೆಗೆ “ಆರೆಂಜ್‌ ಅಲರ್ಟ್‌” ಅನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ವೇಳೆ 115.6 ಮಿ.ಮೀ.ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಜೂ. 29 ಬೆಳಗ್ಗೆ 8.30ರಿಂದ ಜು. 3ರ ವರೆಗೆ ಎಲ್ಲೋ ಅಲರ್ಟ್‌ ಘೊಷಿಸಲಾಗಿದೆ. ಈ ವೇಳೆ 64.5 ಮಿ.ಮೀ.ನಿಂದ 115.5 ಮಿ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next