Advertisement

Odisha; ಸಿಡಿಲು ಸಹಿತ ಭಾರಿ ಮಳೆಗೆ 10 ಮಂದಿ ಬಲಿ

08:53 PM Sep 03, 2023 | Team Udayavani |

ಭುವನೇಶ್ವರ : ಒಡಿಶಾದಲ್ಲಿ ಖುರ್ದಾ ಜಿಲ್ಲೆಯಲ್ಲಿ ಸಿಡಿಲು ಬಡಿದು ನಾಲ್ವರು, ಬೋಲಂಗಿರ್‌ನಲ್ಲಿ ಇಬ್ಬರು ಮತ್ತು ಅಂಗುಲ್, ಬೌಧ್, ಜಗತ್‌ಸಿಂಗ್‌ಪುರ ಮತ್ತು ಧೆಂಕನಾಲ್‌ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿ ತಿಳಿಸಿದೆ.

Advertisement

ಸಿಡಿಲು ಬಡಿದು ಖುರ್ದಾದಲ್ಲಿ ಮೂವರು ಗಾಯಗೊಂಡಿದ್ದಾರೆ. ಅವಳಿ ನಗರಗಳಾದ ಭುವನೇಶ್ವರ ಮತ್ತು ಕಟಕ್ ಸೇರಿದಂತೆ ಒಡಿಶಾದ ಕರಾವಳಿ ಪ್ರದೇಶದಲ್ಲಿ ಮಿಂಚಿನೊಂದಿಗೆ ಭಾರೀ ಮಳೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸೈಕ್ಲೋನಿಕ್ ಸರ್ಕ್ಯುಲೇಷನ್ ಮಾನ್ಸೂನ್ ಅನ್ನು ಸಕ್ರಿಯಗೊಳಿಸಿದ್ದು ಒಡಿಶಾದಾದ್ಯಂತ ಭಾರೀ ಮಳೆಯನ್ನು ಉಂಟುಮಾಡಿದೆ ಎಂದು ಹೇಳಿಕೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next