Advertisement

ತರಳಬಾಳು ಮಠದಿಂದ ಸೈನಿಕ ಕಲ್ಯಾಣ ನಿಧಿಗೆ 10ಲಕ್ಷ ರೂ. ದೇಣಿಗೆ 

01:26 AM Feb 21, 2019 | |

ಸಿರಿಗೆರೆ: ಸಿರಿಗೆರೆಯ ತರಳಬಾಳು ಬ್ರಹನ್ಮಠದಿಂದ ಸೈನಿಕ ಕಲ್ಯಾಣ ನಿಧಿಗೆ 10 ಲಕ್ಷ ರೂ.ದೇಣಿಗೆ ನೀಡಲಾಗಿದೆ. ಮಂಗಳವಾರ ರಾತ್ರಿ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವದ ಸಭಾ ಕಾರ್ಯಕ್ರಮದಲ್ಲಿ ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸೈನಿಕ ಕಲ್ಯಾಣ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಪುಲ್ವಾಮಾದಲ್ಲಿ ಭಯೋತ್ಪಾದಕರ ದಾಳಿಗೆ ಸೈನಿಕರು ಬಲಿಯಾಗಿರುವುದು ದುರದೃಷ್ಟಕರ. ಈ ನಿಟ್ಟಿನಲ್ಲಿ ಸಿರಿಗೆರೆಯ ತರಳಬಾಳು ನರ್ಸರಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರು ಸುಮಾರು 11 ಸಾವಿರ ರೂ.ಸಂಗ್ರಹಿಸಿದ್ದಾರೆ. ಜತೆಗೆ, ಚಿಕ್ಕೇನಹಳ್ಳಿ ಗ್ರಾಮಸ್ಥರು 2 ಸಾವಿರ ರೂ.ಸಂಗ್ರಹಿಸಿ ನೀಡಿದ್ದಾರೆ.
ಮಠದ ದೇಣಿಗೆ ಜತೆಗೆ ಅದೆಲ್ಲವನ್ನೂ ಸೇರಿಸಿ ಸಂಸದ ಜಿ.ಎಂ.ಸಿದ್ದೇಶ್ವರ್‌ ಮೂಲಕ ಸೈನಿಕ ಕಲ್ಯಾಣ ನಿಧಿಗೆ ತಲುಪಿಸಲಾಗುವುದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next