Advertisement

10 ಸ್ಥಾಯಿ ಸಮಿತಿ ಅಧ್ಯಕ್ಷರ ಅವಿರೋಧ ಆಯ್ಕೆ

10:48 AM Jan 24, 2020 | Suhan S |

ಬೆಂಗಳೂರು: ಬಿಬಿಎಂಪಿಯ 10 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ತೋಟಗಾರಿಕೆ ಹಾಗೂ ಲೆಕ್ಕ ಪತ್ರ ಸ್ಥಾಯಿ ಸಮಿತಿ ಚುನಾವಣೆ ಮುಂದೂಡಲಾಗಿದೆ.

Advertisement

ಬಿಬಿಎಂಪಿ ಕೇಂದ್ರ ಕಚೇರಿಯ ಪೌರ ಸಭಾಂಗಣದಲ್ಲಿ ಮೇಯರ್‌ ಗೌತಮ್‌ಕುಮಾರ್‌ ನೇತೃತ್ವದಲ್ಲಿಗುರುವಾರ ನಡೆದ ಸಭೆಯಲ್ಲಿ 10 ಸ್ಥಾಯಿ ಸಮಿತಿಗಳಿಗೆ ಪ್ರತ್ಯೇಕವಾಗಿ ಚುನಾವಣೆ ನಡೆಸಲಾಯಿತು. ಈ ವೇಳೆ ನಾಮಪತ್ರ ಸಲ್ಲಿಕೆ ಮತ್ತು ವಾಪಸ್‌ ಪಡೆಯಲು ಮೇಯರ್‌ ತಲಾ ಒಂದು ನಿಮಿಷ ಕಾಲಾವಕಾಶ ನೀಡಿದರು. ಅಂತಿಮವಾಗಿ ಎಲ್ಲ ಹತ್ತು ಸ್ಥಾಯಿ ಸಮಿತಿಗಳ ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮೇಯರ್‌ ಘೋಷಿಸಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದಲ್ಲಿ ಈ ಬಾರಿ ಎಲ್ಲ ಪಕ್ಷದ ಸದಸ್ಯರೂ ಇದ್ದಾರೆ. ಅದರಂತೆ ಜೆಡಿಎಸ್‌ನಿಂದ ಲಗ್ಗೆರೆ ವಾರ್ಡ್‌ನ ಮಂಜುಳಾ ನಾರಾಯಣಸ್ವಾಮಿ, ಕಾಂಗ್ರೆಸ್‌ನಿಂದ ಯಶವಂತಪುರ ವಾರ್ಡ್‌ನ ಜಿ.ಕೆ. ವೆಂಕಟೇಶ್‌ ಹಾಗೂ ದೊಮ್ಮಲೂರು ವಾರ್ಡ್‌ನ ಪಕ್ಷೇತರ ಸದಸ್ಯ ಲಕ್ಷ್ಮೀನಾರಾಯಣ ಅವರಿಗೆ ಅವಕಾಶ ಸಿಕ್ಕಿದೆ. ಇನ್ನು ಬಿಜೆಪಿಯ ಎಲ್‌.ಶ್ರೀನಿವಾಸ್‌, ಮಂಜುನಾಥ ರಾಜು, ಆಶಾ ಸುರೇಶ್‌, ಹನುಂತಯ್ಯ, ಮೋಹನ್‌ಕುಮಾರ್‌, ಆರ್‌.ಪದ್ಮಾವತಿ ಹಾಗೂ ಅರುಣಾ ರವಿ ಅವರಿಗೂ ಈ ಬಾರಿ ಅಧ್ಯಕ್ಷಗಿರಿ ಸಿಕ್ಕಿದೆ.

ತಾಂತ್ರಿಕ ಸಮಸ್ಯೆಯಿಂದ ಲೆಕ್ಕಪತ್ರ ಹಾಗೂ ತೋಟಗಾರಿಕಾ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಸಾಧ್ಯವಾದಷ್ಟು ಬೇಗ ಅಧ್ಯಕ್ಷರ ಆಯ್ಕೆ ಮಾಡಲಾಗುವುದು. ಗೌತಮ್‌ ಕುಮಾರ್‌, ಬಿಬಿಎಂಪಿ ಮೇಯರ್‌

Advertisement

Udayavani is now on Telegram. Click here to join our channel and stay updated with the latest news.

Next