Advertisement

ಗಂಗೊಳ್ಳಿ ಕೋಸ್ಟಲ್‌ ಬರ್ತ್‌ ನಿರ್ಮಾಣಕ್ಕೆ 100 ಕೋ.ರೂ.: ಸಂಸದ ರಾಘವೇಂದ್ರ

12:07 AM Jul 22, 2022 | Team Udayavani |

ಗಂಗೊಳ್ಳಿ: ಇಲ್ಲಿ ಸುಮಾರು 100 ಕೋ.ರೂ. ವೆಚ್ಚದಲ್ಲಿ ಕೋಸ್ಟಲ್‌ ಬರ್ತ್‌ ನಿರ್ಮಿಸಲು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವರಾದ ಸರ್ಬಾನಂದ ಸೋನೋವಾಲ ಸಮ್ಮತಿಸಿದ್ದಾರೆ. ಇದು ಗಂಗೊಳ್ಳಿಯ ಜೀವನಾಡಿ ಮತ್ಸ್ಯೋದ್ಯಮ ಚೇತನಕ್ಕೆ ಪೂರಕವಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

Advertisement

ಕೋಸ್ಟಲ್‌ ಬರ್ತ್‌ ನಿರ್ಮಾಣಕ್ಕೆ ಅನುದಾನ ಮಂಜೂರಾದ ಕುರಿತು ಹೇಳಿಕೆ ನೀಡಿರುವ ಅವರು, ಸಾಗರಮಾಲ ಯೋಜನೆಯಲ್ಲಿ ಬಂದರು ಸಂಪರ್ಕ ಕೂಡ ಆಗಲಿದ್ದು, ಮುಂದಿನ ದಿನಗಳಲ್ಲಿ ಗಂಗೊಳ್ಳಿ ಒಂದು ಪ್ರಮುಖ ವಾಣಿಜ್ಯ ಕೇಂದ್ರವಾಗಿ ಹೊರಹೊಮ್ಮಲಿದೆೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಣ್ಣ ಉದ್ಯಮಗಳನ್ನು ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಇವರ ವತಿಯಿಂದ ಕೈಗಾರಿಕಾ ವಸಾಹತು ನಿರ್ಮಿಸಲು ಉಡುಪಿ ಜಿಲ್ಲಾಡಳಿತಕ್ಕೆ ಸ್ಥಳ ಗುರುತಿಸಲು ವಿನಂತಿಸಲಾಗಿತ್ತು.

ಅದರಂತೆ ಸುಮಾರು 19 ಎಕರೆ ಸ್ಥಳವನ್ನು ಗುರುತಿಸಿ ಕೈಗಾರಿಕಾ ವಸಾಹತು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಇವುಗಳಿಂದ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದ್ದಾರೆೆ.

ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಸದರು ನಡೆಸುತ್ತಿರುವ ಪ್ರಯತ್ನ ಶ್ಲಾಘನೀಯ ಎಂದು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next