Advertisement

ಪ್ರತಿಭಟನೆಗೆ 100 ದಿನ : ರೈತರಿಂದ 5 ಗಂಟೆ ಕಾಲ ಹೆದ್ದಾರಿ ತಡೆ

01:31 AM Mar 07, 2021 | Team Udayavani |

ಹೊಸದಿಲ್ಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿಯ ಗಡಿಗಳಲ್ಲಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಶನಿವಾರ 100 ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಶನಿವಾರ ರೈತರು, ಕುಂಡಲಿ-ಮಾನೇಸರ್‌ ಪಲ್ವಾಲ್‌ ಎಕ್ಸ್‌ಪ್ರಸ್‌ವೇ ತಡೆ ನಡೆಸಿ ಕರಾಳ ದಿನ ಆಚರಿಸಿದ್ದಾರೆ.

Advertisement

ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ರೈತರು ಬೆ.11ರಿಂದ ಸಂಜೆ 4ರವರೆಗೆ ಹೆದ್ದಾರಿ ತಡೆದು, ಟ್ರ್ಯಾಕ್ಟರ್‌ ರ‍್ಯಾಲಿಯನ್ನೂ ನಡೆಸಿದ್ದಾರೆ. 136 ಕಿ.ಮೀ.ನ ಎಕ್ಸ್‌ಪ್ರಸ್ ವೇನಲ್ಲಿ ತ್ರಿವರ್ಣ ಧ್ವಜ ಹಾಗೂ ರೈತ ಧ್ವಜಗಳನ್ನು ಹಿಡಿದು ಮೆರವಣಿಗೆಯನ್ನೂ ನಡೆಸಿದ್ದು, ನಮ್ಮ ಹೋರಾಟ ಇಲ್ಲಿಗೇ ಮುಗಿದಿಲ್ಲ. ನಾವು ಮತ್ತಷ್ಟು ಬಲಿಷ್ಠರಾಗಿದ್ದೇವೆ ಎಂದು ಸಾರಿ ಹೇಳಿದ್ದಾರೆ.

ರೈತ ಪ್ರತಿಭಟನೆಗೆ 100 ದಿನಗಳು ತುಂಬಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, “ಬಿಜೆಪಿಯ ದುರಹಂಕಾರಕ್ಕೆ 100 ದಿನಗಳು ಸಂದವು. ಇದು ಭಾರತದ ಪ್ರಜಾಪ್ರಭುತ್ವದ ಪುಟಗಳಲ್ಲಿನ ಕರಾಳ ಅಧ್ಯಾಯ’ ಎಂದು ಹೇಳಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ, “ಯಾರ ಮಕ್ಕಳು ದೇಶದ ಗಡಿಗಳಲ್ಲಿ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತಿದ್ದಾರೋ, ಅಂಥವರಿಗೆ ಸರಕಾರ ಮೊಳೆಗಳನ್ನು ಬಡಿಯುತ್ತಿದೆ. ಅನ್ನದಾತರು ತಮ್ಮ ಹಕ್ಕುಗಳನ್ನು ಕೇಳುತ್ತಿದ್ದಾರೆ, ಸರಕಾರ ಅವರ ವಿರುದ್ಧ ದೌರ್ಜನ್ಯ ಎಸಗುತ್ತಿದೆ’ ಎಂದು ಕಿಡಿಕಾರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next