Advertisement

Telangana Congress ಸರಕಾರಕ್ಕೆ 100 ದಿನ; 200 ರೈತರು ಆತ್ಮಹತ್ಯೆ: ಕೆಸಿಆರ್‌

12:08 AM Apr 01, 2024 | Team Udayavani |

ಹೈದರಾಬಾದ್‌: ತೆಲಂಗಾಣದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ಹಿಡಿದ ನಂತರ ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಸರ್ಕಾರಕ್ಕೆ ನೂರು ದಿನಗಳು ತುಂಬುವಷ್ಟರಲ್ಲಿ ರಾಜ್ಯಾದ್ಯಂತ ಸುಮಾರು 200 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಅದಕ್ಷ ಹಾಗೂ ಅಸಮರ್ಥ ಸರಕಾರ ಎಂದು ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ರವಿವಾರ ಟೀಕಿಸಿದ್ದಾರೆ.

Advertisement

ನೀರು ಹಾಗೂ ವಿದ್ಯುತ್‌ ಕೊರತೆಯಿಂದಾಗಿ ರಾಜ್ಯದಲ್ಲಿ ಅಂದಾಜು 15 ಲಕ್ಷ ಎಕರೆ ಬೆಳೆ ಒಣಗಿದೆ. ಇದರಿಂದ ಬೇಸತ್ತ ರೈತರು ಆತ್ಮಹತ್ಯೆಯ ಮಾರ್ಗ ಹಿಡಿದಿದ್ದಾರೆ. ಹೀಗಾಗಿ ಕಾಂಗ್ರೆಸ್ಸಿಗರು ತಮ್ಮ ವೈಫ‌ಲ್ಯಗಳನ್ನು ಮರೆಮಾಚಲು ನಮ್ಮ ಪಕ್ಷದ ಶಾಸಕರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next