Advertisement

25 ದಿನಗಳಲ್ಲಿ ಶೇ.100ರಷ್ಟು ಗುಣ; ಕೇಂದ್ರ ಸರಕಾರದಿಂದಲೇ ಮಾಹಿತಿ ಪ್ರಕಟ

11:23 PM Aug 25, 2020 | mahesh |

ಹೊಸದಿಲ್ಲಿ: ದೇಶದಲ್ಲಿ ಸೋಂಕಿನಿಂದ ಗುಣ ಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಸೋಮವಾರದಿಂದ ಮಂಗಳವಾರಕ್ಕೆ ಒಂದೇ ದಿನ 66,550 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈ ಮೂಲಕ ದೇಶದ ಗುಣಮುಖ ಪ್ರಮಾಣ ಶೇ.75.92ಕ್ಕೇರಿದೆ. ಕಳೆದ 25 ದಿನಗಳಲ್ಲಿ ಗುಣಮುಖ ಪ್ರಮಾಣದಲ್ಲಿ ಶೇ.100ಕ್ಕೂ ಹೆಚ್ಚು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಂಗಳವಾರ ಮಾಹಿತಿ ನೀಡಿದೆ. ಪ್ರಸ್ತುತ ದೇಶದಲ್ಲಿನ ಸಕ್ರಿಯ ಸೋಂಕಿತರ ಪ್ರಮಾಣ ಶೇ.22. 24ರಷ್ಟಿದೆ. ಈ ಸಂಖ್ಯೆಗೆ ಹೋಲಿಸಿದರೆ ಗುಣ ಮು ಖರ ಪ್ರಮಾಣ ಇದಕ್ಕಿಂತ 3.41 ಪಟ್ಟು ಹೆಚ್ಚಿದೆ.

Advertisement

ಪಾಸಿಟಿವ್‌ ಸಂಖ್ಯೆ ಕಡಿಮೆ: ದೇಶಾದ್ಯಂತ ಸೋಂಕು ಪತ್ತೆ ಪರೀಕ್ಷೆಯನ್ನು ವ್ಯಾಪಕವಾಗಿ ಹೆಚ್ಚಿಸ ಲಾಗಿದೆ. ಇದರ ಜತೆಗೆ ಸೋಂಕು ಪಾಸಿಟಿವ್‌ ಆಗುವ ಪ್ರಕರಣಗಳು ಕಡಿಮೆಯಾ ಗಿವೆ. ಸೋಮ ವಾರದಿಂದ ಮಂಗಳವಾರದ ಅವಧಿಯಲ್ಲಿ ಈ ಅಂಶ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಖಾತೆ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ತಿಳಿಸಿದ್ದಾರೆ.

60,975 ಪ್ರಕರಣ ಪತ್ತೆ: ಈ ನಡುವೆ, ದೇಶದಲ್ಲಿ ಸೋಮವಾರದಿಂದ ಮಂಗಳವಾರಕ್ಕೆ 24 ಗಂಟೆಗಳ ಅವಧಿಯಲ್ಲಿ 60,975 ಮಂದಿಗೆ ಸೋಂಕು ದೃಢಪಟ್ಟಿದೆ. 848 ಮಂದಿ ಮೃತಪಟ್ಟಿದ್ದಾರೆ. ಮರಣ ಪ್ರಮಾಣವು ಶೇ.1.84ಕ್ಕಿಳಿಕೆಯಾಗಿದೆ ಎಂದು ಭೂಷಣ್‌ ತಿಳಿಸಿದ್ದಾರೆ.
ರಷ್ಯಾ ಜತೆಗೆ ಮಾತುಕತೆ: ಸೋಂಕು ತಡೆಗೆ ರಷ್ಯಾ ಅಭಿವೃದ್ಧಿಪಡಿಸಿರುವ “ಸ್ಪುಟ್ನಿಕ್‌-5′ ಲಸಿಕೆಯನ್ನು ಖರೀದಿಸುವ ಬಗ್ಗೆ ಮಾತುಕತೆಗಳು ನಡೆದಿವೆ. ರಷ್ಯಾ ಜತೆಗೆ ಪ್ರಾಥಮಿಕ ಮಾಹಿತಿ ಹಂಚಿ ಕೊಳ್ಳಲಾಗಿದೆ ಎಂದು ಆರೋಗ್ಯ ಕಾರ್ಯ ದರ್ಶಿ ತಿಳಿಸಿದ್ದಾರೆ.

ಮಾಸ್ಕ್ ಧರಿಸದವರೇ ಕಾರಣ: ಐಸಿಎಂಆರ್‌
ಸೋಂಕು ದೇಶ ದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಿಸಲು ಮಾಸ್ಕ್ ಧರಿಸದೇ ಬೇಜವಾಬ್ದಾರಿ ಯುತವಾಗಿ ವರ್ತಿಸು ವವರೇ ಕಾರಣ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌)ಯ ತಜ್ಞರು ಅಭಿ ಪ್ರಾಯಪಟ್ಟಿದ್ದಾರೆ. ಸೋಂಕು ವ್ಯಾಪಿಸಲು ಕಿರಿಯರು ಕಾರಣ, ಹಿರಿಯರು ಕಾರಣ ಎಂದು ನಾವು ಹೇಳುವುದಿಲ್ಲ. ಬದಲಿಗೆ, ಮಾಸ್ಕ್ ಧರಿಸದೇ ಸಾರ್ವಜನಿಕವಾಗಿ ಓಡಾಡುವವರು, ನಿರ್ಲಕ್ಷ್ಯ ವಹಿಸುವವರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ವ್ಯಾಪಿಸಿತು ಎಂದು ಐಸಿಎಂಆರ್‌ ಡಿಜಿ ಡಾ. ಬಲರಾಂ ಭಾರ್ಗವ ಹೇಳಿದ್ದಾರೆ. ಇದೇ ವೇಳೆ, ದೇಶದಲ್ಲಿ 3 ಲಸಿಕೆಗಳು ಮುಂಚೂಣಿಯಲ್ಲಿದ್ದು, ಮಾನವನ ಮೇಲಿನ ಪ್ರಯೋಗ ಪ್ರಕ್ರಿಯೆ ನಡೆಸಲಾಗುತ್ತಿವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next