Advertisement

ಬಾಲಮಂದಿರ;ಊಟ ಸೇವಿಸಿದ ನೂರಾರು ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಗಂಭೀರ

08:24 AM Dec 31, 2018 | Team Udayavani |

ಬೆಂಗಳೂರು: ವಿಷಯೂಟ ಸೇವಿಸಿ 103 ಮಕ್ಕಳು ಅಸ್ವಸ್ಥಗೊಂಡಿದ್ದು, ಇಂದಿರಾಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಮಂದಿರದಲ್ಲಿ ಸೋಮವಾರ ನಡೆದಿದೆ.

Advertisement

ಬಾಲಮಂದಿರದಲ್ಲಿರುವ ವಿದ್ಯಾರ್ಥಿಗಳು ನಿನ್ನೆ ರಾತ್ರಿ 8ಗಂಟೆ ಸುಮಾರಿಗೆ ಊಟ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬನ ತಟ್ಟೆಯಲ್ಲಿ ಹಲ್ಲಿಯ ಕಾಲುಗಳು ಇರುವುದು ಕಂಡು ಬಂದಿತ್ತು. ಅಷ್ಟರಲ್ಲಿ ಮಕ್ಕಳು ಊಟ ಮಾಡಿದ್ದರಿಂದ, ಮಕ್ಕಳು ವಾಂತಿ, ಭೇದಿಯಿಂದ ಬಳಲುತ್ತಿದ್ದರು.

ಕೂಡಲೇ ಅಸ್ವಸ್ಥಗೊಂಡ 103 ಮಕ್ಕಳನ್ನು ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೂಕ್ತ ಚಿಕಿತ್ಸೆ ನೀಡಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಏತನ್ಮಧ್ಯೆ ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ಅಸ್ವಸ್ಥ ಮಕ್ಕಳಲ್ಲಿ ಮೂರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಈಗಾಗಲೇ ಬಹುತೇಕ ಮಕ್ಕಳನ್ನು ಡಿಸ್ ಚಾರ್ಜ್ ಮಾಡಲಾಗಿದ್ದು, ಉಳಿದ 40 ಮಕ್ಕಳನ್ನು ಮಧ್ಯಾಹ್ನ ಕಳುಹಿಸಲಾಗುವುದು ಎಂದು ವಿಜಯ್ ಶಂಕರ್ ತಿಳಿಸಿದ್ದಾರೆ. ಆಹಾರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next