Advertisement

ಕುಂದಾಪುರ: ಮಕ್ಕಳ ರಕ್ಷಣಾ ಘಟಕದಿಂದ ಕಾರ್ಯಾಚರಣೆ, ಭಿಕ್ಷಾಟನೆ ನಿರತ 11 ಮಂದಿ ಚಿಣ್ಣರ ರಕ್ಷಣೆ

03:49 PM Nov 07, 2020 | keerthan |

ಕುಂದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಕುಂದಾಪುರ ಪುರಸಭೆ, ಪೊಲೀಸ್‌ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ, ವಿಶ್ವಾಸದಮನೆ ಸಂಸ್ಥೆಗಳು ಸೇರಿ ಶನಿವಾರ ಕುಂದಾಪುರ ಪುರಸಭೆ ವ್ಯಾಪ್ತಿಯ ವಿವಿಧೆಡೆ ಜಂಟಿ ಕಾರ್ಯಾಚರಣೆ ನಡೆಸಿ ಭಿಕ್ಷಾಟನೆ ನಿರತ 11 ಮಂದಿ ಮಕ್ಕಳನ್ನು ರಕ್ಷಿಸಿದ್ದಾರೆ.

Advertisement

ಕುಂದಾಪುರದ ವಾರದ ಸಂತೆ ಮಾರುಕಟ್ಟೆ, ಹೊಸ ಬಸ್‌ ನಿಲ್ದಾಣ, ಪೇಟೆ, ಶಾಸ್ತ್ರಿ ಸರ್ಕಲ್‌ ಬಳಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಶಿರಸಿ ಮತ್ತು ಹಾವೇರಿ ಮೂಲದ 9 ಮಂದಿ ಬಾಲಕಿಯರು ಹಾಗೂ ಇಬ್ಬರು ಬಾಲಕರು ಸೇರಿದಂತೆ ಒಟ್ಟು 11 ಮಕ್ಕಳನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸುವ ಸಲುವಾಗಿ ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ನೀಡಲಾಗಿದೆ.

ಇದನ್ನೂ ಓದಿ:ಮೊದಲ ಬಾರಿಗೆ ಮೂಡುಬಿದಿರೆ ಪುರಸಭೆ ಆಡಳಿತದ ಚುಕ್ಕಾಣಿ ಹಿಡಿದ ಬಿಜೆಪಿ

ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್‌, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್‌, ಕುಂದಾಪುರ ತಾ| ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಎನ್‌., ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ ಶೆಟ್ಟಿ, ಕುಂದಾಪುರ ಪುರಸಭೆಯ ಪರಿಸರ ಅಭಿಯಂತರ ರಾಘವೇಂದ್ರ, ಅಧಿಕಾರಿಗಳಾದ ಶರತ್‌, ರಾಘವೇಂದ್ರ ನಾಯ್ಕ , ಕುಂದಾಪುರದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಅರುಣ್‌ ಕುಮಾರ್‌ ಬಿ.ಎನ್‌., ಶಿಕ್ಷಣ ಇಲಾಖೆಯ ದೇವಾ ಕುಮಾರಿ,  ಸುನಿತಾ ಬಾನು, ಶಂಕರ್‌ ಶೆಟ್ಟಿ, ಕುಂದಾಪುರ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಸದಾಶಿವ ಗವರೋಜಿ, ಸಿಬಂದಿಯಾದ ಪ್ರಸನ್ನ, ಬೇಬಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್‌, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಹೇಶ್‌ ದೇವಾಡಿಗ, ಯೋಗೀಶ್‌, ಸುರಕ್ಷಾ, ಸುನಂದಾ, ಸಂದೇಶ, ಅಂಬಿಕಾ, ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕಿ ಪೂರ್ಣಿಮಾ ಬಾನು, ಮಕ್ಕಳ ಸಹಾಯವಾಣಿಯ ವೃಷಕ್‌ ಪ್ರಮೋದ್‌, ವಿಶ್ವಾಸದಮನೆ ಸಂಸ್ಥೆಯ ಕ್ರಿಸ್ಟೋಪರ್‌ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next