Advertisement

ಶ್ರೀನಗರದಲ್ಲಿ ಗ್ರೆನೇಡ್ ಎಸೆದು ಉಗ್ರರ ಅಟ್ಟಹಾಸ: ವೃದ್ಧ ಬಲಿ , 24 ಮಂದಿಗೆ ಗಾಯ

08:33 PM Mar 06, 2022 | Team Udayavani |

ಶ್ರೀನಗರ : ಇಲ್ಲಿನ ಹರಿ ಸಿಂಗ್ ಹೈ ಸ್ಟ್ರೀಟ್ ಪ್ರದೇಶದಲ್ಲಿ ಭಾನುವಾರ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ  75 ವರ್ಷದ ನಾಗರಿಕ ಸಾವನ್ನಪ್ಪಿದ್ದು, ಒಬ್ಬ ಪೊಲೀಸ್ ಸಿಬ್ಬಂದಿ ಸೇರಿದಂತೆ 24 ಜನರು ಗಾಯಗೊಂಡಿದ್ದಾರೆ.

Advertisement

“ಸಂಜೆ 4:20 ರ ಸುಮಾರಿಗೆ, ಹರಿ ಸಿಂಗ್ ಹೈ ಸ್ಟ್ರೀಟ್‌ನಲ್ಲಿ ಪೊಲೀಸ್ ಮತ್ತು ಭದ್ರತಾ ಪಡೆಗಳ ನಿಯೋಜನೆಯ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಾಳುಗಳನ್ನು ಇಲ್ಲಿನ ಶ್ರೀ ಮಹಾರಾಜ ಹರಿ ಸಿಂಗ್ (SMHS) ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು.

ಹೆಚ್ಚುವರಿ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿದ್ದು, ಅಪರಾಧಿಗಳನ್ನು ಹಿಡಿಯಲು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next