Advertisement

ತೆಲಂಗಾಣದಲ್ಲಿ ಕೈಗೆ ತೀವ್ರ ಮುಖಭಂಗ; 12 “ಕೈ” ಶಾಸಕರು TRS ಪಾಳಯಕ್ಕೆ?

10:08 AM Jun 07, 2019 | Team Udayavani |

ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನನುಭವಿಸಿದ ಮೇಲೆ ಇದೀಗ ತೆಲಂಗಾಣದಲ್ಲಿ 12 ಮಂದಿ ಕಾಂಗ್ರೆಸ್ ಶಾಸಕರು ತೆಲಂಗಾಣ ಸ್ಪೀಕರ್ ಪಿ.ಶ್ರೀನಿವಾಸ್ ರೆಡ್ಡಿ ಅವರನ್ನು ಭೇಟಿಯಾಗಿ ಸಿಎಲ್ ಪಿ(ಕಾಂಗ್ರೆಸ್ ಲೆಜಿಸ್ಲೇಚರ್ ಪಾರ್ಟಿ)ಯಿಂದ ಆಡಳಿತಾರೂಢ ಟಿಆರ್ ಎಸ್ ಜೊತೆ ವಿಲೀನವಾಗುವ ಬಗ್ಗೆ ನಿವೇದನಾ ಪತ್ರವನ್ನು ಸಲ್ಲಿಸಿದ್ದಾರೆ.

Advertisement

119 ಮಂದಿ ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ 18 ಆಗಿದೆ. ಕಾಂಗ್ರೆಸ್ ಪಕ್ಷದ ತೆಲಂಗಾಣ ರಾಜ್ಯ ಘಟಕದ ಅಧ್ಯಕ್ಷ, ಶಾಸಕ ಉತ್ತಮ್ ಕುಮಾರ್ ರೆಡ್ಡಿ ರಾಜೀನಾಮೆ ನೀಡಿ , ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ನಲಗೊಂಡಾದಿಂದ ಆಯ್ಕೆಯಾಗಿದ್ದರು.

ಸದ್ಯ 18 ಸದಸ್ಯ ಬಲದ ಕಾಂಗ್ರೆಸ್ ನ 12 ಮಂದಿ ಶಾಸಕರು ಟಿಆರ್ ಎಸ್ ಸೇರುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಒಂದು ವೇಳೆ ಸ್ಪೀಕರ್ ಈ ಮನವಿಯನ್ನು ಸ್ವೀಕರಿಸಿದರೆ, ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನವನ್ನೂ ಕಳೆದುಕೊಳ್ಳಲಿದೆ.  ಏತನ್ಮಧ್ಯೆ ಟಿಆರ್ ಎಸ್ ಗೆ ಸೇರ್ಪಡೆಗೊಳ್ಳುವ ಕಾಂಗ್ರೆಸ್ ಶಾಸಕರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗುವುದಿಲ್ಲ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next