Advertisement

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ : 12 ಮಂದಿ ಸಾವು, 6 ಮಂದಿಗೆ ಗಾಯ

07:03 PM Aug 31, 2021 | Team Udayavani |

ಜೈಪುರ: ರಾಜಸ್ಥಾನದ ನಾಗೌರ್‌ ಜಿಲ್ಲೆಯಲ್ಲಿ ಹಾದು ಹೋಗುವ ಬಿಕಾನೆರ್‌-ಜೋಧಪುರ ಹೆದ್ದಾರಿಯಲ್ಲಿ ಮಂಗಳವಾರ ಭಾರೀ ಅಪಘಾತ ಸಂಭವಿಸಿದೆ.

Advertisement

ಬೃಹತ್‌ ಗಾತ್ರದ ಕಾರು (ಎಂಯುವಿ) ಹಾಗೂ ಟ್ರಕ್‌ ನಡುವೆ ಢಿಕ್ಕಿ ಸಂಭವಿಸಿ 12 ಮಂದಿ ಮೃತಪಟ್ಟಿದ್ದಾರೆ. ಇತರೆ 6 ಮಂದಿ ಗಾಯಗೊಂಡಿದ್ದಾರೆ.

ಈ ಅಷ್ಟೂ ಮಂದಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಗೆ ಸೇರಿದ್ದಾರೆ. ರಾಮದೇವ್ರಾ ಮತ್ತು ಕರ್ಣಿ ಮಾತಾ ದೇವಸ್ಥಾನದಲ್ಲಿ ದರ್ಶನ ಮುಗಿಸಿ, ಹಿಂತಿರುಗುವಾಗ ಈ ದುರ್ಘ‌ಟನೆ ಸಂಭವಿಸಿದೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಇದನ್ನೂ ಓದಿ :ಮೂರನೇ ಅಲೆ ತಡೆಯಲು ಸಜ್ಜಾಗಿ: ಕಾರ್ಯಕರ್ತರಿಗೆ ಸಚಿವ ಗೋಪಾಲಯ್ಯ ಕರೆ

Advertisement

Udayavani is now on Telegram. Click here to join our channel and stay updated with the latest news.

Next