Advertisement

ಪ್ರವಾಹದಿಂದ ಇಲ್ಲಿಯವರೆಗೆ 12 ಸಾವು: ಸಿಎಂ ಬಿಎಸ್‌ವೈ

09:59 AM Aug 10, 2019 | Team Udayavani |

ಬಾಗಲಕೋಟೆ : ರಾಜ್ಯದ ಉತ್ತರಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಉಂಟಾದ ಪ್ರವಾಹದಿಂದ ಈ ವರೆಗೆ 12 ಜನ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ತಕ್ಷಣ ನೀಡುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

Advertisement

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಸ್ವತಃ ಪರಿಶೀಲಿಸಿದ್ದೇನೆ. ಎಲ್ಲ ಜಿಲ್ಲಾಡಳಿತಗಳು ಹಗಲು ರಾತ್ರಿ ಎನ್ನದೇ 24 ಗಂಟೆಯೂ ಪರಿಹಾರ ಕಾರ್ಯದಲ್ಲಿ ತೊಡಗಿವೆ ಎಂದರು.

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅನುದಾನದ ಕೊರತೆ ಇಲ್ಲ. ಪ್ರವಾಹ ಉಂಟಾದ ಜಿಲ್ಲೆಗಳಿಗೆ ಒಟ್ಟು 1೦೦ ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಗೆ 1೦ ಕೋಟಿ ಅನುದಾನ ಒದಗಿಸಿದ್ದು, ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಒಟ್ಟು 17 ಕೋಟಿ ಹಣವಿದೆ. ಪರಿಹಾರ ಕಾರ್ಯಕ್ಕೆ ಯಾವುದೇ ರೀತಿಯ ಹುಂದೇಟು ಹಾಕದೇ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next