Advertisement
ಮೇಯರ್ ಕವಿತಾ ಸನಿಲ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಂಗಳೂರು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಕಾರ್ಯಸೂಚಿ ಮಂಡಿಸಿದ ಮುಖ್ಯ ಸಚೇತಕ ಎಂ. ಶಶಿಧರ ಹೆಗ್ಡೆ, 8 ಮೀಟರ್ ಎತ್ತರಕ್ಕೆ ನೀರು ಸಂಗ್ರಹಿಸಿದರೆ ಮುಳುಗಡೆಯಾಗುವ ಜಮೀನಿಗೆ ಪರಿಹಾರ ನೀಡಬೇಕಿದೆ. ಈ ಬಗ್ಗೆ ಮೇಯರ್ ಕವಿತಾ ಸನಿಲ್ ಹಾಗೂ ಸಚಿವ ರಮಾನಾಥ ರೈ ವಿಶೇಷ ಮುತುವರ್ಜಿ ವಹಿಸಿ 120 ಕೋ. ರೂ. ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಇದರಂತೆ ಅನುದಾನ ಬಿಡುಗಡೆಗೆ ಕೋರುವ ಬಗ್ಗೆ ಪಾಲಿಕೆ ಸಭೆಯಲ್ಲಿ ಪ್ರಸ್ತಾವನೆಗೆ ಅನುಮೋದನೆ ನೀಡಲಾಯಿತು ಎಂದರು.
ಸರಕಾರದ ಸೂಚನೆ ಪ್ರಕಾರ ಮಂಗಳೂರು ಪಾಲಿಕೆಯ 219 ಖಾಯಂ ಪೌರ ಕಾರ್ಮಿಕರಿಗೆ ಹಾಗೂ 42 ಬದಲಿ ಪೌರ ಕಾರ್ಮಿಕರಿಗೆ ದಿನನಿತ್ಯ 20 ರೂ. ದರದ ಬೆಳಗಿನ ಉಪಾಹಾರ ನೀಡಲು ಪಾಲಿಕೆ ನಿರ್ಧರಿಸಿದೆ.
Related Articles
ಮರವೂರು ಸಮೀಪದ ಕೈಗಾರಿಕೆಗಳ ತ್ಯಾಜ್ಯ ಹಾಗೂ ರಾಸಾಯನಿಕದಿಂದ ಫಲ್ಗುಣಿ ನದಿ ಕಲುಷಿತಗೊಂಡಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೂರ್ಣ ಪರಿಶೀಲಿಸಲು ಪಾಲಿಕೆಯ ಸದನ ಸಮಿತಿ ರಚಿಸಲು ನಿರ್ಧರಿಸಲಾಯಿತು. ಸದನ ಸಮಿತಿ ವರದಿ ಪರಿಶೀಲಿಸಿ ಈ ಕ್ರಮ ಕೈಗೊಳ್ಳುವುದಾಗಿ ಮೇಯರ್ ತಿಳಿಸಿದರು.
Advertisement