Advertisement

ಆಘಾತ: ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

06:17 PM Dec 08, 2021 | Team Udayavani |

ನವದೆಹಲಿ:ತಮಿಳುನಾಡಿನ ಕೂನುರು ಸಮೀಪ ನಡೆದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೇಶದ ಮೂರು ಸೇನೆಗಳ ಮುಖ್ಯಸ್ಥ ಬಿಪಿನ್ ರಾವತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ವಾಯುಸೇನೆ ಅಧಿಕೃತವಾಗಿ ತಿಳಿಸಿವೆ.

Advertisement

ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ 12 ಮಂದಿ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಸೇನೆಯ ಅತ್ಯಾಧುನಿಕ MI-17 V5 ಹೆಲಿಕಾಪ್ಟರ್ ತಮಿಳುನಾಡಿನ ಕೂನುರು ಸಮೀಪ ಪತನಕ್ಕೀಡಾದ ಭೀಕರ ದುರಂತ ಬುಧವಾರ (ಡಿಸೆಂಬರ್ 08) ನಡೆದಿತ್ತು.

ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿದಂತೆ ಮೂವರನ್ನು ರಕ್ಷಿಸಲಾಗಿದೆ. ಇನ್ನುಳಿದ ಹನ್ನೊಂದು ಮಂದಿಯ ಶವವನ್ನು ಹೊರಕ್ಕೆ ತೆಗೆಯಲಾಗಿದೆ ಎಂದು ವರದಿ ತಿಳಿಸಿತ್ತು. ಇಂದು ಮುಂಜಾನೆ ದೆಹಲಿಯಿಂದ ತಮಿಳುನಾಡಿಗೆ ವಿಮಾನದಲ್ಲಿ ಆಗಮಿಸಿದ್ದ ರಾವತ್ ಮತ್ತು ಅಧಿಕಾರಿಗಳು. ನಂತರ ಎಂಐ-17ವಿ 5 ಹೆಲಿಕಾಪ್ಟರ್ ನಲ್ಲಿ ಸೂಳೂರಿನತ್ತ ಪ್ರಯಾಣಿಸಿದ್ದರು. ಹೆಲಿಕಾಪ್ಟರ್ ದುರಂತದಲ್ಲಿ  14 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next