Advertisement

Vishwakarma Yojana: ವಿಶ್ವಕರ್ಮ ಯೋಜನೆಗೆ 13,000 ಕೋ.ರೂ.: ಅಶ್ವಿ‌ನಿ ವೈಷ್ಣವ್‌

12:21 AM Aug 17, 2023 | Team Udayavani |

ಹೊಸದಿಲ್ಲಿ: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗಾಗಿ ಕೇಂದ್ರ ಸಚಿವ ಸಂಪುಟವು ಬುಧವಾರ 13,000 ಕೋಟಿ ರೂ.ಗಳಿಗೆ ಅನುಮೋದನೆ ನೀಡಿದೆ. ಇದರಿಂದ ನೇಕಾರರು, ಅಕ್ಕಸಾಲಿಗರು, ಕಮ್ಮಾರರು, ಅಗಸರು, ಕ್ಷೌರಿಕರು ಸೇರಿದಂತೆ ಸುಮಾರು 30 ಲಕ್ಷ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಉಪಯೋಗವಾಗಲಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ನೂತನ ಯೋಜನೆಯನ್ನು ಘೋಷಿಸಿದ್ದರು. ಈ ಯೋಜನೆಯಡಿಯಲ್ಲಿ ಕುಶಲಕರ್ಮಿಗಳಿಗೆ ಶೇ.5ರ ಬಡ್ಡಿಯಲ್ಲಿ ಮೊದಲ ಹಂತದಲ್ಲಿ 1 ಲಕ್ಷ ರೂ. ಸಾಲ ಹಾಗೂ ಎರಡನೇ ಹಂತದಲ್ಲಿ 2 ಲಕ್ಷ ರೂ. ಸಾಲ ದೊರೆಯಲಿದೆ ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌ ತಿಳಿಸಿದ್ದಾರೆ.

Advertisement

ಡಿಜಿಟಲ್‌ ಇಂಡಿಯಾ: ಡಿಜಿಟಲ್‌ ಇಂಡಿಯಾ ಯೋಜನೆಯ ಮುಂದುವರಿಕೆಗಾಗಿ 14,903 ಕೋಟಿ ರೂ.ಗಳಿಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. ಈ ಯೋಜನೆಯಡಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ 2.65 ಲಕ್ಷ ಮಂದಿಗೆ ತರಬೇತಿ ನೀಡಲಾಗುತ್ತದೆ ಹಾಗೂ 5.25 ಲಕ್ಷ ಟೆಕಿಗಳಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಎಂದು ವೈಷ್ಣವ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next