Advertisement

ಅಪಾರ್ಟ್‌ಮೆಂಟ್‌ನಲ್ಲಿ ಕಲುಷಿತ ನೀರು ಸೇವಿಸಿ 132 ಮಕ್ಕಳು ಅಸ್ವಸ್ಥ  

03:34 PM Jun 09, 2023 | Team Udayavani |

ಬೆಂಗಳೂರು: ಕಲುಷಿತ ನೀರು ಸೇವಿಸಿ ಒಂದೇ ಅಪಾರ್ಟ್‌ಮೆಂಟ್‌ನ 132 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯ ಮಹಾವೀರ್‌ ರಾಂಚಸ್‌ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

Advertisement

ಈ ಸಂಬಂಧ ಅಪಾರ್ಟ್‌ಮೆಂಟ್‌ ನಿವಾಸಿಗಳು ಮಾಲೀಕರು ಮತ್ತು ನಿರ್ವಾಹಕರ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಬುಧವಾರ ಅಪಾರ್ಟ್‌ಮೆಂಟ್‌ನಲ್ಲಿರುವ ಮಕ್ಕಳು ನೀರು ಸೇವಿಸಿ ವಾಂತಿ ಮತ್ತು ಭೇದಿ ಮತ್ತು ಜ್ವರದಿಂದ ಅಸ್ವಸ್ಥಗೊಂಡಿದ್ದರು. ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಆರು ಮಕ್ಕಳು ತೀವ್ರ ಸುಸ್ತಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಮುಂದುವರಿದಿದ್ದು, ನಿಗಾವಹಿಸಲಾಗಿದೆ. ಇತರೆ ಮಕ್ಕಳು ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಎಂದು ಪೊಲೀಸರು ಹೇಳಿದರು.

ಮೂರು ವರ್ಷಗಳಿಂದ ಸ್ವಚ್ಛಗೊಳಿಸಿಲ್ಲ: ಪ್ರಾಥಮಿಕ ತನಿಖೆಯಲ್ಲಿ ಅಪಾರ್ಟ್‌ಮೆಂಟ್‌ ನಲ್ಲಿರುವ ನೀರಿನ ಟ್ಯಾಂಕ್‌ಗಳನ್ನು ಮೂರು ವರ್ಷಗಳಿಂದ ಸ್ವಚ್ಛಗೊಳಿಸಿಲ್ಲ. ಹೀಗಾಗಿ ನೀರು ಕಲುಷಿತಗೊಂಡಿದೆ. ಈ ನೀರು ಸೇವಿಸಿದ ಪರಿಣಾಮ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ ಆರೇಳು ಮಂದಿಯ ವೈದ್ಯರ ತಂಡ ಅಪಾರ್ಟ್‌ಮೆಂಟ್‌ನಲ್ಲೇ ಉಳಿದುಕೊಂಡಿದ್ದು, ಮಕ್ಕಳ ಮೇಲೆ ನಿಗಾವಹಿಸಿದೆ ಎಂದು ಪೊಲೀಸರು ಹೇಳಿದರು. ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next