Advertisement

Sugar ಕಾರ್ಖಾನೆಯಲ್ಲಿ 14 ಕೋ.ರೂ. ಗೋಲ್‌ಮಾಲ್‌: ಪ್ರಕರಣ ದಾಖಲು

12:10 AM Oct 28, 2023 | Team Udayavani |

ಬ್ರಹ್ಮಾವರ: ಇಲ್ಲಿನ ದ.ಕ. ಸಹಕಾರಿ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟ ಕುರಿತಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

25 ಮಂದಿ ಆರೋಪಿಗಳು ಸೇರಿ 18-08-21ರಿಂದ 05-12-2022ರ ನಡುವಿನ ಅವಧಿಯಲ್ಲಿ ಕಾರ್ಖಾ ನೆಯ ಸಕ್ಕರೆ ಸ್ಥಾವರ ಮತ್ತು ಯಂತ್ರೋಪಕರಣಗಳ ಮಾರಾಟಕ್ಕೆ ಸಂಬಂಧಿಸಿದಂತೆ ಟೆಂಡರ್‌ ಕಮ್‌ ಹರಾಜು ಪ್ರಕ್ರಿಯೆಯಲ್ಲಿ ವಂಚನೆ, ದಾಖಲೆಗಳನ್ನು ರಚಿಸುವಲ್ಲಿ ಅವರ ಪಾತ್ರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ.

ಅವರು ವೈಯಕ್ತಿಕ ಲಾಭ ಪಡೆಯುವ ಉದ್ದೇಶದಿಂದ ಪರಸ್ಪರ ಪಿತೂರಿ ನಡೆಸಿ ರೈತರಿಗೆ ಮತ್ತು ಸರಕಾರಕ್ಕೆ 14 ಕೋಟಿ ರೂಪಾಯಿಗೆ ಕಡಿಮೆ ಇಲ್ಲದಷ್ಟು ಹಣವನ್ನು ರಾಜ್ಯ ಸರಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿ ಅಪರಾಧ ಎಸಗಿದ್ದಾಗಿ ಸತೀಶ್‌ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರಿನಂತೆ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next