Advertisement

Delhi; ಸರಕಾರದ ಶೆಲ್ಟರ್ ಹೋಮ್‌ನಲ್ಲಿ 20 ದಿನಗಳಲ್ಲಿ 14 ಮಂದಿ ನಿಗೂಢ ಸಾವು !!

06:08 PM Aug 02, 2024 | Team Udayavani |

ಹೊಸದಿಲ್ಲಿ : ದೆಹಲಿ ಸರ್ಕಾರ ನಡೆಸುತ್ತಿರುವ ವಿಶೇಷಚೇತನರ ಆಶ್ರಯಧಾಮದಲ್ಲಿ 14 ಮಂದಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ತನಿಖೆಯಿಂದ ತಿಳಿದುಬಂದಿದೆ.ರೋಹಿಣಿಯಲ್ಲಿರುವ ‘ಆಶಾ ಕಿರಣ್’ ಆಶ್ರಯ ಮನೆಯಲ್ಲಿ ಜನವರಿಯಿಂದ 27 ಸಾವುಗಳು ವರದಿಯಾಗಿವೆ. ನಿರ್ಲಕ್ಷ್ಯ ಮತ್ತು ಕಳಪೆ ನಿರ್ವಹಣೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದ್ದು ಇನ್ನೊಂದು ರಾಜಕೀಯ ಸಮರಕ್ಕೆ ಕಾರಣವಾಗಿದೆ.

Advertisement

ಪ್ರಾಥಮಿಕ ವರದಿಗಳ ಪ್ರಕಾರ, ಮೃತರಲ್ಲಿ 14 ವರ್ಷದ ಅಪ್ರಾಪ್ತ ವಯಸ್ಕ, ಉಳಿದ 13 ಮಂದಿ 20 ವರ್ಷಕ್ಕಿಂತ ಮೇಲ್ಪಟ್ಟವರು. ಜುಲೈ 15 ಮತ್ತು 31 ರ ನಡುವೆ 13 ಮಂದಿ ಸಾವನ್ನಪ್ಪಿದ್ದು, 8 ಮಹಿಳೆಯರು ಮತ್ತು 5 ಪುರುಷರು ಸೇರಿದ್ದಾರೆ ಜುಲೈ 1 ಮತ್ತು 15 ರ ನಡುವೆ ಒಬ್ಬರು ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ.

ಆಶಾಕಿರಣ್ ಆಶ್ರಯ ಮನೆಯಲ್ಲಿ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸಾವಿನ ಸಂಖ್ಯೆ ಕಳೆದ ವರ್ಷಕ್ಕಿಂತ ಹೆಚ್ಚು ಎಂದು ಗಮನಿಸಿದ SDM, ಮರಣೋತ್ತರ ಪರೀಕ್ಷೆಯ ವರದಿಗಳ ನಂತರ ಸಾವಿನ ನಿಜವಾದ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ. SDM ವರದಿಯು ಕೈದಿಗಳಿಗೆ ನೀಡುತ್ತಿರುವ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ರಾಷ್ಟ್ರೀಯ ಮಹಿಳಾ ಆಯೋಗ (NCW) ನಿರ್ಲಕ್ಷ್ಯಕ್ಕಾಗಿ ಆಮ್ ಆದ್ಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಸತ್ಯಶೋಧನಾ ತಂಡವನ್ನು ಶೆಲ್ಟರ್ ಹೋಮ್‌ ಗೆ ಕಳುಹಿಸಿದ್ದಾರೆ.

ದೆಹಲಿ ಸರ್ಕಾರ ನಡೆಸುತ್ತಿರುವ ಆಶಾ ಕಿರಣ್ ಆಶ್ರಯ ಮನೆ ಎಲ್ಲರ ಭರವಸೆ ಕಳೆದುಕೊಂಡಿದ್ದು ಜನರು ಅದರಲ್ಲಿ ನರಳುತ್ತಿದ್ದಾರೆ ಮತ್ತು ಸಾಯುತ್ತಿದ್ದಾರೆ. ದೆಹಲಿ ಸರ್ಕಾರವು ಏನನ್ನೂ ಮಾಡುತ್ತಿಲ್ಲ, ವಿಚಾರಣೆಗೆ ನಮ್ಮ ತಂಡವನ್ನು ಕಳುಹಿಸಲಾಗಿದೆ” ಎಂದು NCW ಅಧ್ಯಕ್ಷೆ ರೇಖಾ ಶರ್ಮ ಹೇಳಿದ್ದಾರೆ.

Advertisement

ದೆಹಲಿ ಸಚಿವೆ ಅತಿಶಿ, ಸಾವಿನ ಸಂಖ್ಯೆಯ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದು, ಮ್ಯಾಜಿಸ್ಟ್ರೇಟ್ ತನಿಖೆಯನ್ನು ಪ್ರಾರಂಭಿಸಲು ಮತ್ತು 48 ಗಂಟೆಗಳಲ್ಲಿ ವರದಿಯನ್ನು ಸಲ್ಲಿಸುವಂತೆ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಜನವರಿ 2024 ರಿಂದ ಆಶ್ರಯ ಮನೆಯಲ್ಲಿ 14 ಸಾವುಗಳು ಸಂಭವಿಸಿವೆ ಎಂದು ಅತಿಶಿ ಹೇಳಿದ್ದಾರೆ.

ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡುವಂತೆ ಸಚಿವೆ ಕೋರಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ನಿರ್ಲಕ್ಷ್ಯದಿಂದ ಯಾವುದೇ ಸಾವು ಸಂಭವಿಸಿದ್ದರೆ, ಅದರಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ದೆಹಲಿಯ ಜನರಿಗೆ ಭರವಸೆ ನೀಡುತ್ತೇನೆ.ನಾವು ಮರಣೋತ್ತರ ಪರೀಕ್ಷೆಗಳ ವರದಿಗಾಗಿ ಕಾಯುತ್ತಿದ್ದೇವೆ ಮತ್ತು 24 ಗಂಟೆಗಳ ನಂತರ ಮ್ಯಾಜಿಸ್ಟ್ರಿಯಲ್ ವಿಚಾರಣೆಯ ಪ್ರಾಥಮಿಕ ವರದಿ ಹೊರಬರುತ್ತದೆ ಎಂದು ಸಚಿವೆ ಹೇಳಿದ್ದಾರೆ.

BJP VS AAP

ಪರಿಸ್ಥಿತಿ ಅವಲೋಕಿಸಲು ದೆಹಲಿ ಬಿಜೆಪಿಯ ತಂಡದು ಆಶಾ ಕಿರಣ್ ಆಶ್ರಯ ಮನೆಗೆ ತೆರಳಿದೆ. ನಮ್ಮ ಮಾಹಿತಿಯಂತೆ ನಿರಾಶ್ರಿತರಿಗೆ ಗಲೀಜು ನೀರು ಬರುತ್ತಿದೆ, ಊಟ ಸಿಗುತ್ತಿಲ್ಲ, ಚಿಕಿತ್ಸೆ ಸಿಗುತ್ತಿಲ್ಲ, ಈ ಬಗ್ಗೆ ತನಿಖೆ ನಡೆಸಿ, ಇದರಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳನ್ನು ಶಿಕ್ಷಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರೇಖಾ ಗುಪ್ತಾ ಹೇಳಿಕೆ ನೀಡಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಸಚಿವ ಗೋಪಾಲ್ ರಾಯ್, ಮಯೂರ್ ವಿಹಾರ್‌ನ ಚರಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ ತಾಯಿ ಮತ್ತು ಮಗನ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next