Advertisement

Mangaluru ವಿಮಾನ ದುರಂತಕ್ಕೆ 14 ವರ್ಷ; ದ.ಕ. ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

12:40 AM May 23, 2024 | Team Udayavani |

ಪಣಂಬೂರು: ದೇಶದ ಜನರನ್ನು ಬೆಚ್ಚಿ ಬೀಳಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನ ದುರಂತ ಸಂಭವಿಸಿ 14 ವರ್ಷ ಕಳೆದಿದ್ದು, ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಮೃತರ ಗೌರವಾರ್ಥ ಬುಧವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.

Advertisement

ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್‌ ನಿರ್ಮಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ನೇತೃತ್ವದಲ್ಲಿ ಪುಷ್ಪಗುತ್ಛ ಇರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌, ಮಂಗಳೂರು ವಿಮಾನ ನಿಲ್ದಾಣದ ಉಸ್ತುವಾರಿ ಆಧಿಕಾರಿ ನವೇದ್‌ ನಜೀಮ್‌, ಎನ್‌ಎಂಪಿಟಿಎ ಮುಖ್ಯ ಎಂಜಿನಿಯರ್‌ ಶೇಖರ್‌ , ತಹಶೀಲ್ದಾರ್‌ ಪ್ರಶಾಂತ್‌, ಉಪತಹಶೀಲ್ದಾರ್‌ ನವೀನ್‌ ಕುಮಾರ್‌, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್‌, ಸಂತ್ರಸ್ತರ ಕುಟುಂಬದ ಸದಸ್ಯರಾದ ಶೋಭಾ ಶೆಟ್ಟಿ, ಶ್ರೇಯಾ ಮೊದಲಾದವರು ಉಪಸ್ಥಿತರಿದ್ದರು.

2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾೖಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಲ್ಯಾಂಡ್‌ ಆಗುವ ಹಂತದಲ್ಲಿ ಪೈಲಟ್‌ಗಳ ತಪ್ಪಿನಿಂದ ಹತೋಟಿ ತಪ್ಪಿ ಟರ್ಮಿನಲ್‌ ಬಳಿ ಕೆಂಜಾರಿನ ಕಡಿದಾದ ಗುಡ್ಡದಿಂದ ಕೆಳಗೆ ಉರುಳಿತ್ತು. ಪೈಲಟ್‌, ಸಿಬಂದಿ ಸಹಿತ 158 ಮಂದಿ ಬೆಂಕಿ ಹತ್ತಿಕೊಂಡು ಮೃತಪಟ್ಟಿದ್ದರು. ಅಪಘಾತದಲ್ಲಿ ಬದುಕುಳಿದವರು 8 ಮಂದಿ ಮಾತ್ರ. ವಿಮಾನದಲ್ಲಿ ಒಟ್ಟು 19 ಮಕ್ಕಳು ಹಾಗೂ 6 ಮಂದಿ ಶಿಶುಗಳು, 6 ವಿಮಾನ ಸಿಬಂದಿ ಸೇರಿ 166 ಮಂದಿ ಪ್ರಯಾಣಿಸುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next