Advertisement

ಬೇರೆ ಬೇರೆ ಪಕ್ಷದಿಂದ 15-20 ಶಾಸಕರು ಬಿಜೆಪಿಗೆ ಬರಲು ಸಿದ್ದರಿದ್ದಾರೆ: ಲಕ್ಷ್ಮಣ ಸವದಿ

03:45 PM May 29, 2020 | keerthan |

ಹಾವೇರಿ: ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳಿಂದ 15ರಿಂದ 20 ಮಂದಿ ಶಾಸಕರು ಬಿಜೆಪಿಗೆ ಸೇರಲು ತಯಾರಿದ್ದಾರೆ. ಅವರನ್ನು ತೆಗೆದುಕೊಳ್ಳಬೇಕೋ ಬೇಡವೋ ಎಂಬ ಚಿಂತನೆ ನಮ್ಮ ಪಕ್ಷದಲ್ಲಿ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

Advertisement

ಹಾವೇರಿಯಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ ಅನೇಕ ಶಾಸಕರು ಸಂಪರ್ಕದಲ್ಲಿದ್ದಾರೆ. ಅವರನ್ನು ತೆಗೆದುಕೊಳ್ಳಬೇಕೋ ಬೇಡವೋ ಎಂಬ ಚಿಂತನೆ ನಮ್ಮ ಪಕ್ಷದಲ್ಲಿದೆ ಎಂದಿದ್ದಾರೆ.

ಬೇರೆ ಬೇರೆ ಪಕ್ಷದಿಂದ 15-20 ಶಾಸಕರು ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ. ಈ ಬಗ್ಗೆ ಪಕ್ಷ, ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಬಿಜೆಪಿ ಪಕ್ಷದ ವರ್ಚಸ್ಸು ಇರೋದರಿಂದಲೇ ಅವರೆಲ್ಲ ಬರಲು ಮುಂದಾಗಿದ್ದಾರೆ ಎಂದಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸುವಿದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next