Advertisement

BSY ವಿರುದ್ಧದ 15 ಕೇಸ್ ಗೆ ಮರುಜೀವ; ರಾಜ್ಯ ಸರ್ಕಾರ ಸುಪ್ರೀಂಗೆ ಮೊರೆ

01:08 PM Feb 27, 2017 | Sharanya Alva |

ಬೆಂಗಳೂರು:ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವೆ ಡೈರಿ ಸಮರ, ಆರೋಪ, ಪ್ರತ್ಯಾರೋಪ ಮುಂದುವರಿದಿರುವ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಕಾನೂನಿನ ಅಸ್ತ್ರ ಬಳಸಿ ಹಣಿಯುವ ತಂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿರುವುದಾಗಿ ಖಾಸಗಿ ಮಾಧ್ಯಮದ ವರದಿಗಳು ತಿಳಿಸಿವೆ.

Advertisement

ಬಿಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಶ್ ನ್ ಸೇರಿದಂತೆ ಸುಮಾರು 15 ಪ್ರಕರಣಗಳನ್ನು ಹೈಕೋರ್ಟ್ ರದ್ದು ಮಾಡಿದೆ. ಹಾಗಾಗಿ ರದ್ದುಗೊಂಡಿರುವ ಪ್ರಕರಣಕ್ಕೆ ಮರು ಜೀವ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉನ್ನತ ಮೂಲಗಳು ಹೇಳಿವೆ ಎಂದು ವರದಿ ವಿವರಿಸಿದೆ.

ಬಿಎಸ್ ವೈ ವಿರುದ್ಧ ಹೈಕೋರ್ಟ್ ರದ್ದು ಮಾಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಸುಪ್ರೀಂಕೋರ್ಟ್ ನಲ್ಲಿ ಪರಿಣಾಮಕಾರಿ ವಾದ ಮಂಡಿಸುವ ಮೂಲಕ ಬಿಎಸ್ ಯಡಿಯೂರಪ್ಪ ಅವರನ್ನು ಕಾನೂನಿಗೆ ಕುಣಿಕೆಗೆ ಸಿಲುಕಿಸುವ ತಂತ್ರ ಹೂಡಿರುವುದಾಗಿ ವರದಿ ಹೇಳಿದೆ.

ಲೋಕಾಯುಕ್ತದ ಭ್ರಷ್ಟಾಚಾರ ನಿಗ್ರಹ ಒಂಬುಡ್ಸಮನ್ ಕಳೆದ ವರ್ಷ ಬಿಎಸ್ ಯಡಿಯೂರಪ್ಪ ವಿರುದ್ಧದ ಪ್ರಕರಣಗಳ ಬಗ್ಗೆ ಮೇಲ್ಮನವಿ ಸಲ್ಲಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next