Advertisement

ಕೃಷಿ ವಿಜ್ಞಾನ ಕೇಂದ್ರದ 15 ಬಿಎಸ್ ಸಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು!

02:04 PM Apr 08, 2021 | Team Udayavani |

ಚಾಮರಾಜನಗರ: ನಗರದ ಹೊರವಲಯದ ಹರದನಹಳ್ಳಿ ಬಳಿ ಕೃಷಿ ವಿಜ್ಞಾನ ಕೇಂದ್ರ 15 ವಿದ್ಯಾರ್ಥಿಗಳಿಗೆ ಗುರುವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಸೋಂಕಿತ ವಿದ್ಯಾರ್ಥಿಗಳನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಕೃಷಿ ಕಾಲೇಜಿನಲ್ಲಿ ರಾಜ್ಯದ ವಿವಿಧ ಭಾಗಗಳ 60 ವಿದ್ಯಾರ್ಥಿಗಳು ಬಿಎಸ್ ಸಿ ಅಧ್ಯಯನ ಮಾಡುತ್ತಿದ್ದು, ಅವರ ಪೈಕಿ ನಾಲ್ವರು ವಿದ್ಯಾರ್ಥಿಗಳು ಹಾಗೂ 11 ವಿದ್ಯಾರ್ಥಿನಿಯರಿಗೆ ಕೋವಿಡ್ ದೃಢಪಟ್ಟಿದ್ದು, ಇನ್ನು 40 ಮಂದಿ ವಿದ್ಯಾರ್ಥಿಗಳ ಫಲಿತಾಂಶ ಬರಬೇಕಿದೆ.

ಕಾಲೇಜಿನ 12 ಬೋಧಕ ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಕೋವಿಡ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕಾಲೇಜು ಆವರಣವನ್ನು ಕಂಟೋನ್ಮೆಂಟ್ ಪ್ರದೇಶ ಮಾಡಲು ನಿರ್ಧರಿಸಲಾಗಿದ್ದು, ಆವರಣದ ಕಟ್ಟಡಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಬುಧವಾರದಿಂದಲೇ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next