Advertisement

ಪೇಜಾವರ ಮಠದಿಂದ 15 ಲಕ್ಷ ರೂ.ಬಿಡುಗಡೆ

01:12 AM Aug 10, 2019 | Team Udayavani |

ಮೈಸೂರು: ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಪೇಜಾವರ ಮಠದ ವತಿಯಿಂದ ನೆರವು ನೀಡಲಾಗುತ್ತಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಿಳಿಸಿದ್ದಾರೆ.

Advertisement

ನಗರದ‌ಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಠದ ವತಿಯಿಂದ ಮೊದಲ ಭಾಗವಾಗಿ 15 ಲಕ್ಷ ರೂ.ಬಿಡುಗಡೆ ಮಾಡಲಾಗುತ್ತಿದೆ. ರಾಜ್ಯದ ಯಾವುದಾದರು ಒಂದು ಪ್ರದೇಶವನ್ನು ಆಯ್ಕೆ ಮಾಡಿಕೊಂಡು ನೆರವು ಕಾರ್ಯ ಮಾಡಲಾಗುವುದು. ಇದಕ್ಕಾಗಿ ಉತ್ತರ ಕರ್ನಾಟಕದ ಬೆಳಗಾವಿ ಭಾಗದಲ್ಲಿ ಹೆಚ್ಚು ಹಾನಿಯಾಗಿರುವುದರಿಂದ ಅಲ್ಲಿ ಕೆಲಸ ಮಾಡಲು ಸಂಕಲ್ಪ ಮಾಡಿದ್ದೇವೆ ಎಂದು ತಿಳಿಸಿದರು. ಚಾತುರ್ಮಾಸ್ಯ ಇರುವ ಕಾರಣ ನಾನು ಹೊರ ಹೋಗಲಾಗುತ್ತಿಲ್ಲ. ನಮ್ಮ ಕಾರ್ಯಕರ್ತರನ್ನು ಕಳುಹಿಸಿ ವ್ಯವಸ್ತೆ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next