Advertisement

150 ಕೋಟಿ ರೂ. ಅನುದಾನ ತಂದಿದ್ದೇನೆ

05:07 PM Aug 21, 2019 | Team Udayavani |

ಶಿರಾ: ರಸ್ತೆ ಅಭಿವೃದ್ಧಿ ಮತ್ತು ಕುಡಿಯುವ ನೀರಿನ ಸೌಲಭ್ಯಕ್ಕೆ 150 ಕೋಟಿ ರೂ. ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಿಸಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಶಾಸಕ ಬಿ.ಸತ್ಯನಾರಾಯಣ ಹೇಳಿದರು. ತಾವರೆಕೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆ.ಕೆ. ಪಾಳ್ಯದಲ್ಲಿ 1.5 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿ ಮಾತ ನಾಡಿದರು. ಸರ್ಕಾರಿ ಶಾಲೆಗಳು ಗುಣ ಮಟ್ಟದ ಶಿಕ್ಷಣ ನೀಡುತ್ತಿದ್ದರೂ ಆಂಗ್ಲ ಮಾಧ್ಯಮ ವ್ಯಾಮೋಹಕ್ಕೆ ಬಿದ್ದಿರುವ ಪೋಷಕರು ಲಕ್ಷಾಂತರ ರೂ. ಖರ್ಚು ಮಾಡಿ ಖಾಸಗಿ ಶಾಲೆಗೆ ಮಕ್ಕಳ ದಾಖಲಿಸುತ್ತಿದ್ದಾರೆ. ಇದರಿಂದ ಖಾಸಗಿ ಕಾನ್ವೆಂಟ್ ಮಾಲೀಕರು ಕೋಟ್ಯಾಧೀಶ ರಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿಯೇ ಮಕ್ಕಳ ಓದಿಸುವ ಪ್ರವೃತ್ತಿ ಬೆಳೆಸಿ ಕೊಂಡರೆ ಹಣ ವ್ಯರ್ಥವಾಗುವುದು ತಪ್ಪುತ್ತದೆ ಎಂದು ಹೇಳಿದರು.

Advertisement

ಕೆ.ಕೆ.ಪಾಳ್ಯಕ್ಕೆ ಇದುವರೆಗೂ ಬಸ್‌ ಸೌಲಭ್ಯ ಕಲ್ಪಿಸಿಲ್ಲ ಎಂಬ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಶಾಸಕ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಶಿರಾ ಘಟಕದಲ್ಲಿ ಬಸ್‌ ಕೊರತೆ ಇದ್ದು ಶೀಘ್ರವೇ ಕೆ.ಕೆ.ಪಾಳ್ಯ ಮಾರ್ಗವಾಗಿ ಬಸ್‌ ಸಂಚರಿಸುವಂತೆ ಕ್ರಮ ಕೈಗೊಳ್ಳಲಾಗುವುದೆಂದರು.

ಎಪಿಎಂಸಿ ಅಧ್ಯಕ್ಷ ನರಸಿಂಹೇಗೌಡ, ಚಂಗಾವರ ಗ್ರಾಪಂ ಅಧ್ಯಕ್ಷೆ ಪುಟ್ಟರಂಗಮ್ಮ ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷ ವೈ.ಕೆ. ತಿಪ್ಪೇಸ್ವಾಮಿ, ಜೆಡಿಎಸ್‌ ಮುಖಂಡ ಚಂಗಾವರ ಮಾರಣ, ಲೋಕೋಪ ಯೋಗಿ ಎಇಇ ಷಣ್ಮುಖಪ್ಪ, ಇಒ ಮೋಹನ್‌ ಕುಮಾರ್‌, ಗ್ರಾಪಂ ಉಪಾಧ್ಯಕ್ಷ ಲಿಂಗಯ್ಯ, ಗುತ್ತಿಗೆದಾರ ಪಾಂಡುರಂಗಯ್ಯ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next