Advertisement

ಲಾಕ್ ಡೌನ್ ಕಾರಣದಿಂದ ರಾಜ್ಯ ಸಾರಿಗೆ ಸಂಸ್ಥೆಗೆ 1500 ಕೋಟಿ ರೂ. ನಷ್ಟ

01:31 PM Sep 18, 2020 | keerthan |

ದಾವಣಗೆರೆ: ಕೋವಿಡ್-19, ಲಾಕ್ ಡೌನ್ ಕಾರಣದಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗೆ 1500 ಕೋಟಿ ರೂ. ನಷ್ಟು ನಷ್ಟವಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಎಂ. ಚಂದ್ರಪ್ಪ ತಿಳಿಸಿದರು.

Advertisement

ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ ಸಂಚಾರ ಇಲ್ಲದ ಕಾರಣದಿಂದ ನಷ್ಟ ಉಂಟಾಗಿದೆ. ರಾಜ್ಯ ಸರ್ಕಾರ 1350 ಕೋಟಿ ನೀಡಿದ್ದರಿಂದ ಸಿಬ್ಬಂದಿಯ ವೇತನಕ್ಕೆ ಅನುಕೂಲ ಆಗಿದೆ. ನಷ್ಟದ ನಡುವೆಯೂ ಸಿಬ್ಬಂದಿ ವೇತನ ನಿಲ್ಲಿಸಿಲ್ಲ ಎಂದರು.

ಈಗಿನ ಮಾರ್ಗಸೂಚಿ ಅನ್ವಯ ಬಸ್ ಸಂಚಾರದಿಂದ ಡೀಸೆಲ್ ಖರ್ಚಿಗೂ ಆಗುವುದಿಲ್ಲ. ಹಾಗಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳೊಂದಿಗೆ ಎಲ್ಲಾ ಮಾರ್ಗದಲ್ಲಿ ಬಸ್ ಸಂಚಾರ ಪ್ರಾರಂಭಿಸುವಂತೆ ಸೂಚನೆ ನೀಡಲಾಗಿದೆ. ಆಂಧ್ರ ಪ್ರದೇಶ, ಗೋವಾ, ಮಹಾರಾಷ್ಟ್ರ ಅಂತರ ರಾಜ್ಯ ಬಸ್ ಸಂಚಾರಕ್ಕೆ ಅನುಮತಿ ದೊರೆತಿದೆ. ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಸಾರಿಗೆ ಸಂಸ್ಥೆ ಸೇವಾ ಮನೋಭಾವ ಸಂಸ್ಥೆಯಾಗಿದೆ.‌ ಹಾಗಾಗಿ ನಷ್ಟವಾದರೂ ಸಾರ್ವಜನಿಕರಿಗೆ ಸೇವೆ ನೀಡಲಾಗುವುದು. ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಸಾಲ ಮಾಡಿಯಾದರೂ ಸರಿಯೇ ಸಂಸ್ಥೆಯ ಅಭಿವೃದ್ಧಿಪಡಿಸುವ ಜೊತೆಗೆ ಅಧಿಕಾರಿಗಳು, ಸಿಬ್ಬಂದಿ ಹಿತ ಕಾಪಾಡಲಾಗುವುದು ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next