Advertisement

1500 farmers ಈ ಬಾರಿ ಗಣರಾಜ್ಯ ಪರೇಡ್‌ನ‌ ವಿಶೇಷ ಅತಿಥಿಗಳು

12:56 AM Jan 19, 2024 | Team Udayavani |

ಹೊಸದಿಲ್ಲಿ: ಇದೇ ಮೊದಲ ಬಾರಿಗೆ ದೇಶದ ಸುಮಾರು 1,500 ಮಂದಿ ರೈತರು ಹಾಗೂ ಅವರ ಪತ್ನಿಯರನ್ನು ಗಣರಾಜ್ಯೋತ್ಸವ ದಿನದ ಪರೇಡ್‌ಗೆ ವಿಶೇಷ ಅತಿಥಿಗಳಾಗಿ ಆಹ್ವಾನ ನೀಡಲಾಗಿದೆ. ಕೇಂದ್ರ ಕೃಷಿ ಸಚಿವಾಲಯದ ಹಿರಿಯ ಅಧಿಕಾರಿಗಳೇ ಈ ಕುರಿತು ಮಾಹಿತಿ ನೀಡಿದ್ದಾರೆ.

Advertisement

ಅನ್ನದಾತರಿಗೆ ವಿಶೇಷ ಆಹ್ವಾನ ನೀಡಿದ್ದು ಇದೇ ಮೊದಲು. ಕೃಷಿ ಉತ್ಪಾದಕರ ಸಂಘ, ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಹಾಗೂ ಸಣ್ಣ ನೀರಾವರಿ ಯೋಜನೆಯ ಫ‌ಲಾನುಭವಿಗಳಿಗೆ ಆಮಂತ್ರಣ ನೀಡಲಾಗಿದೆ. ಗಣರಾಜ್ಯ ಪರೇಡ್‌ ಬಳಿಕ ರೈತರಿಗೆ ಭೋಜನದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next