Advertisement

Manipur: 1,500 ಮಣಿಪುರ ವಿದ್ಯಾರ್ಥಿಗಳಿಗೆ ಮಿಜೋರಾಂನಲ್ಲಿ ಶಿಕ್ಷಣಕ್ಕೆ ಅವಕಾಶ

09:45 PM Jun 21, 2023 | Team Udayavani |

ಐಜ್ವಾಲ್‌/ಪುಣೆ: ಜನಾಂಗೀಯ ಹಿಂಸೆಯಿಂದ ತತ್ತರಿಸಿ ಹೋಗಿರುವ ಮಣಿಪುರದಿಂದ 1,500 ಮಂದಿ ವಿದ್ಯಾರ್ಥಿಗಳನ್ನು ಅವರ ಕುಟುಂಬ ಸಹಿತ ಮಿಜೋರಾಂಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಅವರಿಗೆ ಶಾಲೆಯಲ್ಲಿ ಶಿಕ್ಷಣ ಮುಂದುವರಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಮಿಜೋರಾಂ ಶಿಕ್ಷಣ ಸಚಿವಾಲಯ ಬುಧವಾರ ತಿಳಿಸಿದೆ.

Advertisement

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಅವರಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ. ಹಿಂಸಾಕೃತ್ಯಗಳಿಂದ ಅವರು ಅಗತ್ಯ ದಾಖಲೆಗಳನ್ನು ಕಳೆದುಕೊಂಡಿರುವ ಸಾಧ್ಯತೆಗಳೂ ಇದೆ. ಈ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ಆದ್ಯತೆ ನೀಡುವ ಬಗ್ಗೆಯೂ ಶಾಲೆಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ. ಕೇಂದ್ರ ಸರ್ಕಾರದಿಂದ ಈ ಬಗ್ಗೆ ರಾಜ್ಯಕ್ಕೆ ಸೂಕ್ತ ರೀತಿಯ ವಿತ್ತೀಯ ನೆರವು ಸಿಗುವ ವಿಶ್ವಾಸವಿದೆ ಎಂದು ಮಿಜೋರಾಂ ಗೃಹ ಇಲಾಖೆ ಆಯುಕ್ತ ಮತ್ತು ಕಾರ್ಯದರ್ಶಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next