Advertisement

16 ಲಕ್ಷ ಕೋಟಿ ಶ್ರೀಮಂತರ ಸಾಲ ಮನ್ನಾ: ರಾಹುಲ್‌

01:30 AM Apr 07, 2024 | Team Udayavani |

ಹೈದರಾಬಾದ್‌: ಕಾಂಗ್ರೆಸ್‌ ಪಕ್ಷದ ಪ್ರಣಾ ಳಿಕೆಯು ಭಾರತೀಯ ಧ್ವನಿಯಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಹೇಳಿ ದ್ದಾರೆ. ಹೈದರಾಬಾದ್‌ನಲ್ಲಿ ಆಯೋಜಿ ಸಲಾಗಿದ್ದ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿ ಯಾದ ಬಳಿಕ ಕೋಟ್ಯಂತರ ಜನರು ಭಾರತ ದಲ್ಲಿ ಬಡವರಾಗಿದ್ದಾರೆ ಎಂದು ಅವರು ಆರೋಪಿಸಿದರು.

Advertisement

ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ಕಾಂಗ್ರೆಸ್‌ ನಾಯಕ, ದೇಶದಲ್ಲಿ ನಿತ್ಯ 30 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಮೋದಿ ರೈತರ ಸಾಲಮನ್ನಾ ಮಾಡದೇ, ಶ್ರೀಮಂತರ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿ ದ್ದಾರೆ ಎಂದು ಹೇಳಿದರು.

ಒಂದು ವೇಳೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕಿಸಾನ್‌ ನ್ಯಾಯದಡಿ ರೈತರ ಸಾಲಮನ್ನಾ ಮಾಡಲಾಗುವುದು ಮತ್ತು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ದೊರಕಿಸಿಕೊಡಲಾಗುವುದು ಎಂದು ಹೇಳಿದರು. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೀಡಿದ್ದ ಭರವಸೆಗಳನ್ನು ಪೂರೈ ಸುತ್ತಿದೆ. ವಾಗ್ಧಾನದಂತೆ ಕಾಂಗ್ರೆಸ್‌ ಈಗಾಗಲೇ 30 ಸಾವಿರ ಸರಕಾರ ಹುದ್ದೆಗಳನ್ನು ಭರ್ತಿ ಮಾಡಿದ್ದು, ಶೀಘ್ರವೇ 50 ಸಾವಿರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು.

ಚುನಾವಣೆ ಬಾಂಡ್‌ ಜಗತ್ತಿನ ಅತೀದೊಡ್ಡ ಹಗರಣ: ಚುನಾವಣ ಬಾಂಡ್‌ ಜಗತ್ತಿನ ಅತೀದೊಡ್ಡ ಹಗರಣವಾಗಿದೆ ಎಂದು ರಾಹುಲ್‌ ಗಾಂಧಿ ಅವರು ಬಿಜೆಪಿಯ ವಿರುದ್ಧ ಹರಿಹಾಯ್ದರು.

Advertisement

Udayavani is now on Telegram. Click here to join our channel and stay updated with the latest news.

Next