Advertisement

ಜೂಜಾಡುತ್ತಿದ್ದ 16 ಮಂದಿಯ ಬಂಧನ

02:20 PM Mar 18, 2017 | Team Udayavani |

ಮಡಿಕೇರಿ: ಕೊಡಗು-ಕೇರಳ ಗಡಿಭಾಗವಾದ ಮಾಕುಟ್ಟ ಸಮೀಪ ಜಾತ್ರೆಯೊಂದರ ಸಂದರ್ಭ ಜೂಜಾಟದಲ್ಲಿ ತೊಡಗಿದ್ದ ಸುಮಾರು 16 ಮಂದಿಯನ್ನು ಬಂಧಿಸಿರುವ ಜಿಲ್ಲಾ ಅಪರಾಧ ಪತ್ತೆ ದಳದ ಸಿಬಂದಿ, ಆರೋಪಿಗಳಿಂದ 56 ಸಾವಿರ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

Advertisement

ಗಡಿಭಾಗವಾದ ಮಾಕುಟ್ಟ ಬಳಿಯ ಕಾಕೆಮಾನಿ ಭಗವತೀ ದೇವಾಲಯದ ಜಾತ್ರೆ ಬುಧವಾರದಿಂದ ಆರಂಭವಾಗಿದ್ದು, ಇನ್ನೂ ಮೂರು ದಿನಗಳ ಕಾಲ ನಡೆಯಲಿದೆ. ಈ ಜಾತ್ರೆಯಲ್ಲಿ ಭಾರೀ ಪ್ರಮಾಣದ ಜೂಜಾಟ ನಡೆಯುತ್ತಿರುವುದಾಗಿ ದೊರೆತ ಸುಳಿವಿನ ಮೇರೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್‌ ಅವರ ಮಾರ್ಗದರ್ಶನದಲ್ಲಿ ಬುಧವಾರ ಮಧ್ಯರಾತ್ರಿ ದಾಳಿ ನಡೆಸಿದ ಅಪರಾಧ ಪತ್ತೆದಳದ ಸಿಬಂದಿ 16 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜೂಜಾಟದಲ್ಲಿ ಸುಮಾರು 500ಕ್ಕೂ ಅಧಿಕ ಮಂದಿ ಭಾಗಿಯಾಗಿದ್ದು, ಪೊಲೀಸ್‌ ಸಿಬಂದಿಯ ಸಂಖ್ಯೆ ಕಡಿಮೆ ಇದ್ದುದರಿಂದ ಹೆಚ್ಚಿನ ಆರೋಪಿಗಳು ಕಾಡಿನೊಳಗೆ ನುಗ್ಗಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಆದರೂ ರಾತ್ರಿ ವೇಳೆ ಸಾಹಸದಿಂದ 16 ಮಂದಿಯನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಂದ 56 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳೆಲ್ಲರೂ ನೆರೆಯ ಕೇರಳ ರಾಜ್ಯದವರೆನ್ನಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಅಪರಾಧ ಪತ್ತೆದಳದ ಇನ್‌ಸ್ಪೆಕ್ಟರ್‌ ಮಹೇಶ್‌, ಸಿಬಂದಿಗಳಾದ ಹಮೀದ್‌, ತಮ್ಮಯ್ಯ, ಅನಿಲ್‌, ವೆಂಕಟೇಶ್‌, ವಸಂತ್‌, ನಿರಂಜನ್‌, ಯೋಗೀಶ್‌, ಗಣೇಶ್‌, ಶೇಷಪ್ಪ, ಶಶಿಧರ್‌ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next