Advertisement

ಸಿದ್ದರಬೆಟ್ಟ ಶ್ರೀಮಠದಲ್ಲಿ 16ನೇ ವಾರ್ಷಿಕೋತ್ಸವ ; ಜನಜಾಗೃತಿ ಧರ್ಮ ಸಮಾವೇಶ

06:50 PM Jun 23, 2022 | Team Udayavani |

ಕೊರಟಗೆರೆ: ಸಿದ್ದರಬೆಟ್ಟದ ಶ್ರೀವೀರಭದ್ರ ಶಿವಚಾರ್ಯರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಸಿದ್ದರಬೆಟ್ಟ ಶ್ರೀಮಠವು ಮಾನವ ಧರ್ಮ ಸ್ಥಾಪನೆಗೆ ಆದ್ಯತೆ ನೀಡಿದೆ. ಜಗದ್ಗುರು ರೇಣುಕಾಚಾರ್ಯ ಮತ್ತು ಬಸವಣ್ಣನವರ ಆಶೀರ್ವಾದ ಸದಾ ಶ್ರೀಮಠದ ಮೇಲೆ ಇರಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದಕರು ತಿಳಿಸಿದರು.

Advertisement

ಕೊರಟಗೆರೆ ತಾಲೂಕಿನ ಸಸ್ಯಸಂಜೀವಿನಿ ಕ್ಷೇತ್ರ ಸಿದ್ದರಬೆಟ್ಟದ ಶ್ರೀಬಾಳೆಹೊನ್ನೂರು ಖಾಸ ಶಾಖಾ ಮಠದಲ್ಲಿ ಗುರುವಾರ ಏರ್ಪಡಿಸಲಾಗಿದ್ದ 16 ನೇ ವಾರ್ಷಿಕೋತ್ಸವ, ಸಾಮೂಹಿಕ ವಿವಾಹ ಮಹೋತ್ಸವ, ಸಿದ್ದಶ್ರೀ ಪ್ರಶಸ್ತಿ ಪ್ರಧಾನ ಮತ್ತು ಜನಜಾಗೃತಿ ಧರ್ಮ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕೇದಾರಪೀಠದ ಶ್ರೀಹಿಮವತ್ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ1008 ಜಗದ್ಗುರು ರಾವಲ್ ಪದವಿಭೂಷಿತ ಭೀಮಾಶಂಕರಲಿAಗ ಶಿವಾಚಾರ್ಯ ಭಗವತ್ಪಾದಕರು ಮಾತನಾಡಿ ಕೇದಾರನಾತಪೀಠ ಮತ್ತು ರಂಭಾಪುರಿ ಶ್ರೀಮಠ ವರ್ಷಕ್ಕೆ ೧ತಿಂಗಳು ಧರ್ಮಜಾಗೃತಿ ಸಮಾವೇಶಗಳಿಗೆ ಮೀಸಲು ಇರಿಸಿದೆ. ಧರ್ಮಜಾಗೃತಿ ಕಾರ್ಯಕ್ರಮಕ್ಕೆ ಭಕ್ತಾವೃಂದ್ದ ಸಹಾಯಹಸ್ತ ಮತ್ತು ಸ್ವಯಂಪ್ರೇರಿತವಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.

ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, 16 ವರ್ಷದಲ್ಲಿ ೫೦ವರ್ಷದ ಸಾಧನೆ ಮಾಡಿರುವ ಸಿದ್ದರಬೇಟ್ಟ ಶ್ರೀಗಳ ಕಾರ್ಯ ಶ್ಲಾಘನೀಯ. ಸಿದ್ದರಬೆಟ್ಟ ಶ್ರೀಮಠಕ್ಕೆ ಕೊರಟಗೆರೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಭಕ್ತರಿದ್ದಾರೆ. ಸಿದ್ದರಬೆಟ್ಟ ಶ್ರೀಮಠದ ಭಕ್ತರಾಗಿ ನಾವು ಶ್ರೀಗಳು ತೋರಿಸಿದ ಕೆಲಸ ಮಾಡುತ್ತೇವೆ. ಗ್ರಾಮೀಣ ಪ್ರದೇಶದ ಅಭಿವೃದ್ದಿ ಕೆಲಸ ಮತ್ತು ಅನುಧಾನದ ಜವಾಬ್ದಾರಿ ನನ್ನದು. ಶ್ರೀಮಠದ ಜೊತೆಯಲ್ಲಿ ರಾಜ್ಯ ಸರಕಾರ ಮತ್ತು ನಾನು ಸದಾ ಇರುತ್ತೇನೆ ಎಂದು ಭರವಸೆ ನೀಡಿದರು.

ಸಿದ್ದರಬೆಟ್ಟ ಶ್ರೀಮಠದ ಪೀಠಾಧ್ಯಕ್ಷ ಶ್ರೀವೀರಭದ್ರ ಶಿವಚಾರ್ಯ ಸ್ವಾಮೀಜಿ ಮಾತನಾಡಿ ಭಕ್ತರ ಸಹಕಾರ ಮತ್ತು ಸಹಾಯದಿಂದ ಸಿದ್ದರಬೆಟ್ಟ ಶ್ರೀಮಠ ಭಕ್ತರಿಗೆ ಆಸರೆಯಾಗಿದೆ. ಸಿದ್ದರಬೆಟ್ಟ ಶ್ರೀಮಠದಿಂದ ಪ್ರತಿವರ್ಷ ೧ಗ್ರಾಮವನ್ನು ದತ್ತು ಪಡೆದು ಅಭಿವೃದ್ದಿ, ಶಿಕ್ಷಣ ಮತ್ತು ಉದ್ಯೋಗಕ್ಕೆ ಆಧ್ಯತೆ ನೀಡುತ್ತೇವೆ. ಪರಿಶುದ್ದವಾದ ಭಸ್ಮ ಘಟಕವು ಸಿದ್ದರಬೆಟ್ಟ ಶ್ರೀಮಠದಲ್ಲಿ ಪ್ರಾರಂಭವಾಗಿದೆ ಎಂದು ತಿಳಿಸಿದರು.

Advertisement

ಕಣ್ವಕುಪ್ಪೆ ಶ್ರೀಮಠದ ಡಾ.ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ದೊಡ್ಡಗುಣಿಯ ಶ್ರೀರೇವಣ್ಣಸಿದ್ದ ಶಿವಚಾರ್ಯ ಸ್ವಾಮಿಗಳು, ಎಲೆರಾಂಪುರದ ಡಾ.ಹನುಮಂತನಾಥ ಸ್ವಾಮೀಜಿ, ದೇವಾಪುರದ ಶ್ರೀಶಿವಮೂರ್ತಿ ಶಿವಚಾರ್ಯ ಸ್ವಾಮೀಜಿ, ಮಳಲಿಮಠದ ಡಾ.ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಕಾರದಮಠದ ಶ್ರೀಕಾರದ ವೀರಬಸವ ಸ್ವಾಮೀಜಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ತುಮಕೂರು ಸಂಸದ ಜಿ.ಎಸ್.ಬಸವರಾಜು, ಕೊರಟಗೆರೆ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್, ಪಿಡಬ್ಲ್ಯೂಡಿ ಅಪರ ರಾಜ್ಯ ಕಾರ್ಯದರ್ಶಿ ಅನಿಲ್‌ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕರವಿ, ಅಖಿಲಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಸಿದ್ದಮಲ್ಲಪ್ಪ, ಹಾಲು ಒಕ್ಕೂಟದ ನಿರ್ದೇಶಕ ಈಶ್ವರಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next