Advertisement

ಅಪ್ಪನಿಗೆ ಯಕೃತ್ತು ದಾನ ಮಾಡಿದ ಮಗಳು

12:06 AM Feb 19, 2023 | Team Udayavani |

ಕೊಚ್ಚಿ: ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ತಮ್ಮ ತಂದೆಗೆ ಕಿಡ್ನಿ ದಾನ ಮಾಡಿದ್ದು ಇತ್ತೀಚೆಗೆ ಭಾರೀ ಸುದ್ದಿಯಾಗಿ ಪ್ರಶಂಸೆಗೆ ಪಾತ್ರವಾಗಿತ್ತು. ಕೇರಳದಲ್ಲೂ ಅದೇ ಮಾದರಿಯ ಪ್ರಕರಣ ನಡೆದಿದ್ದು, 17 ವರ್ಷದ ವಿದ್ಯಾರ್ಥಿನಿ ತನ್ನ ಯಕೃತ್ತಿನ ಒಂದು ಭಾಗವನ್ನೇ ಅಪ್ಪನಿಗೆ ದಾನ ನೀಡಿದ್ದಾಳೆ.

Advertisement

ಲಿವರ್‌ ಕ್ಯಾನ್ಸರ್‌ನಿಂದ ಬಳಲುತ್ತಿರುವ 48 ವರ್ಷದ ಪ್ರತೀಶ್‌ ಅವರಿಗೆ ಯಕೃತ್ತು ಕಸಿ ಶಸ್ತ್ರಚಿಕಿತ್ಸೆ ನಡೆಸದೇ ಬೇರೆ ವಿಧಿಯಿಲ್ಲ ಎಂದು ವೈದ್ಯರು ಹೇಳಿದ್ದರು. ದಾನಿಗಳಿಗೆ ಎಷ್ಟೇ ಹುಡುಕಾಡಿದರೂ ಯಾರೊಬ್ಬರೂ ಮುಂದೆ ಬರಲಿಲ್ಲ.

ಕೊನೆಗೆ ಪ್ರತೀಶ್‌ ಅವರ ಮಗಳು, 12ನೇ ತರಗತಿಯ ವಿದ್ಯಾರ್ಥಿನಿ ದೇವಾನಂದ, ತಾನೇ ಅಪ್ಪನಿಗೆ ಯಕೃತ್ತು ದಾನ ಮಾಡಲು ನಿರ್ಧರಿಸಿದಳು. ಆದರೆ, ಅಪ್ರಾಪ್ತ ವಯಸ್ಸಿನವರು ಅಂಗಾಂಗ ದಾನ ಮಾಡುವಂತಿಲ್ಲ ಎಂಬ ನಿಯಮವಿದ್ದ ಕಾರಣ, ಆಕೆ ಕೋರ್ಟ್‌ ಮೆಟ್ಟಿಲೇರಿದ್ದಳು. ಕೋರ್ಟ್‌ನ ಒಪ್ಪಿಗೆಯ ಮೇರೆಗೆ ಫೆ.9ರಂದು ಯಶಸ್ವಿ ಶಸ್ತ್ರಚಿಕಿತ್ಸೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next