Advertisement
ಸರ್ಕಾರಿ ಜಮೀನನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಕಾರ್ಯಾಚರಣೆ ನಡೆಸಿ, ಜಿಲ್ಲೆಯ ವಿಭಾಗಾಧಿಕಾರಿಗಳು, ಬಿ.ಎಂ.ಟಿ.ಎಫ್. ಅಧಿಕಾರಿಗಳು, ಪೋಲೀಸ್ ಅಧಿಕಾರಿಗಳು, ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಹಾಗೂ ಅವರ ಸಿಬ್ಬಂದಿ ವರ್ಗದವರ ಸಹಯೋಗದಿಂದಿಗೆ ತೆರವುಗೊಳಿಸಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
Related Articles
Advertisement
ಯಲಹಂಕ ತಾಲ್ಲೂಕು, ಹೆಸರಘಟ್ಟ ಹೋಬಳಿ, ಕಾಳತಿಮ್ಮನಹಳ್ಳಿ ಗ್ರಾಮದ ಸರ್ಕಾರಿ ಕೆರೆ ಸರ್ವೆ ನಂ. 25 ರಲ್ಲಿ ಒಟ್ಟು ವಿಸ್ತೀರ್ಣ 18-21 ಎ/ಗುಂಟೆ ಪೈಕಿ 4-00 ಎಕರೆ ಜಮೀನು ಒತ್ತುವರಿಯಾಗಿದ್ದು, ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ ಅವರು ಹೆಸರಘಟ್ಟ ಹೋಬಳಿ, ಮೈಲಪ್ಪನಹಳ್ಳಿ ಗ್ರಾಮದ ಸರ್ಕಾರಿ ಕರೆ ಸರ್ವೆ ನಂ. 91 ರಲ್ಲಿ ಒಟ್ಟು ವಿಸ್ತೀರ್ಣ 11-26 ಎ/ಗುಂಟೆ ಪೈಕಿ 2-11 ಎಕರೆ ಜಮೀನು ಒತ್ತುವರಿಯಾಗಿದ್ದು ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿದೆ ಎಂದರು.
ಹೆಸರಘಟ್ಟ ಹೋಬಳಿ, ಮಾದಪ್ಪನಹಲ್ಳಿ ಗ್ರಾಮದ ಸರ್ಕಾರಿ ಕರೆ ಸರ್ವೆ ನಂ. 73 ರಲ್ಲಿ ಒಟ್ಟು ವಿಸ್ತೀರ್ಣ 2-02 ಎ/ಗುಂಟೆ ಪೈಕಿ 0-20 ಎಕರೆ ಜಮೀನು ಒತ್ತುವರಿಯಾಗಿದ್ದು ಅಂದಾಜು 09-00 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ತಹಶೀಲ್ದಾರ್ ನರಸಿಂಹಮೂರ್ತಿ ಹಾಗೂ ಅವರ ಸಿಬ್ಬಂದಿಯೊಂದಿಗೆ ತೆರವುಗೊಳಿಸಲಾಯಿತು.
ಅದರಂತೆ ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ ಅಗರ ಗ್ರಾಮದ ಸರ್ಕಾರಿ ಗೋಮಾಳ ಸರ್ವೆ ನಂ. 31 ರಲ್ಲಿ ಒಟ್ಟು ವಿಸ್ತೀರ್ಣ 14-34 ಎ/ಗುಂಟೆ ಪೈಕಿ 1-00 ಎಕರೆ ಜಮೀನು ಒತ್ತುವರಿಯಾಗಿದ್ದು, ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿರುತ್ತದೆ. ಅಗರ ಗ್ರಾಮದ ಸರ್ಕಾರಿ ಗೋಮಾಳ ಸರ್ವೆ ನಂ. 73 ರಲ್ಲಿ ಒಟ್ಟು ವಿಸ್ತೀರ್ಣ 91-28 ಎ/ಗುಂಟೆ ಪೈಕಿ 2-00 ಎಕರೆ ಜಮೀನು ಒತ್ತುವರಿಯಾಗಿದ್ದು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ
ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿಗಳಾದ ಡಾ|| ಎಂ.ಜಿ.ಶಿವಣ್ಣ, ತಹಶೀಲ್ದಾರ್ ಶಿವಪ್ಪ ಹೆಚ್. ಲಮಾಣಿ , ಹಾಗೂ ಅವರ ಸಿಬ್ಬಂದಿಯೊಡನೆ ಅಂದಾಜು 04-00 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ತೆರವುಗೊಳಿಸಲಾಗಿದೆ.
ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಬೊಮ್ಮೇನಹಳ್ಳಿ ಗ್ರಾಮದ ಸರ್ಕಾರಿ ಗೋಮಾಳ ಸರ್ವೆ ನಂ. 96 ರಲ್ಲಿ ಒಟ್ಟು ವಿಸ್ತೀರ್ಣ 04-00 ಎ/ಗುಂಟೆ ಪೈಕಿ 04-00 ಎಕರೆ ಜಮೀನು ಒತ್ತುವರಿಯಾಗಿದ್ದು, ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿರುತ್ತದೆ. ವರ್ತೂರು ಹೋಬಳಿ ಮುಳ್ಳೂರು ಗ್ರಾಮದ ಸರ್ಕಾರಿ ಗುಂಡುತೋಪು ಸರ್ವೆ ನಂ. 30 ರಲ್ಲಿ ಒಟ್ಟು ವಿಸ್ತೀರ್ಣ 1-10 ಎ/ಗುಂಟೆ ಪೈಕಿ 0-20 ಗುಂಟೆ ಜಮೀನು ಒತ್ತುವರಿಯಾಗಿದ್ದು ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿರುತ್ತದೆ. ವರ್ತೂರು ಹೋಬಳಿ ಮುಳ್ಳೂರು ಗ್ರಾಮದ ಸರ್ಕಾರಿ ಗುಂಡುತೋಪು ಸರ್ವೆ ನಂ. 31 ರಲ್ಲಿ ಒಟ್ಟು ವಿಸ್ತೀರ್ಣ 0-13 ಗುಂಟೆ ಪೈಕಿ 0-02 ಗುಂಟೆ ಜಮೀನು ಒತ್ತುವರಿಯಾಗಿದ್ದು ಸದರಿ ಜಮೀನನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿರುತ್ತದೆ. ವರ್ತೂರು ಹೋಬಳಿ ಗುಂಜೂರು ಗ್ರಾಮದ ಸರ್ಕಾರಿ ಖರಾಬು ಸರ್ವೆ ನಂ. 290 ರಲ್ಲಿ ಒಟ್ಟು ವಿಸ್ತೀರ್ಣ 1-07 ಗುಂಟೆ ಪೈಕಿ 0-07 ಗುಂಟೆ ಜಮೀನು ಒತ್ತುವರಿಯಾಗಿದ್ದು ಅಂದಾಜು 15-00 ಕೋಟಿ ಮೌಲ್ಯದ ಈ ಸರ್ಕಾರಿ ಜಮೀನನ್ನು ತಹಶೀಲ್ದಾರ್, ಅಜಿತ್ ರೈ ಸಾರೋಕೆ ಮತ್ತು ಅವರ ಸಿಬ್ಬಂದಿಯೊಡನೆ ತೆರವುಗೊಳಿಸಲಾಯಿತು ಎಂದು ಅವರು ತಿಳಿಸಿದರು.