Advertisement

ಕೇಂದ್ರದಿಂದ 18 ಲಕ್ಷ ಮನೆ  ಮಂಜೂರು: ಸೋಮಣ್ಣ

11:08 PM Mar 19, 2022 | Team Udayavani |

ಹುಬ್ಬಳ್ಳಿ: ಕೇಂದ್ರ ಸರಕಾರ ದಿಂದ ರಾಜ್ಯಕ್ಕೆ 18 ಲಕ್ಷ ಮನೆಗಳು ಮಂಜೂರಾಗಿದ್ದು, ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾ ಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

Advertisement

ಕುಂದಗೋಳದಲ್ಲಿ ಮಾತನಾ ಡಿದ ಅವರು, ರಾಜ್ಯದಲ್ಲಿ ಇದುವರೆಗೆ 5 ಲಕ್ಷ ಮನೆ ನಿರ್ಮಿಸಲಾಗಿದೆ. ಇದರಲ್ಲಿ ನಾಲ್ಕು ಲಕ್ಷ ಮನೆಗಳನ್ನು ಗ್ರಾಮೀಣ ಭಾಗಕ್ಕೆ ನೀಡಲಾಗಿದೆ. ಮೂರು ಲಕ್ಷ ಮನೆಗಳನ್ನು ಬಸವ ಯೋಜನೆಯಡಿ ಮಂಜೂರು ಮಾಡಲಾಗಿದೆ ಎಂದರು.

ವಸತಿ ನಿಗಮದಿಂದ ಹಣ ವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ವಸತಿ ಯೋಜನೆ ಲಾಭ ಪಡೆಯವ ಫಲಾನುಭವಿಗಳ ಆದಾಯ ಮಿತಿ ಯನ್ನು 1.20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ವಸತಿ ಇಲಾಖೆ ಯಿಂದ ರಾಜ್ಯದಲ್ಲಿ 6,600 ನಿವೇಶನ ಖರೀದಿಸಿ ಬಡವರಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next