Advertisement

ದಾವಣಗೆರೆ ಜಿಲ್ಲೆಯಲ್ಲಿಂದು ಕೋವಿಡ್ ಗೆದ್ದ 187 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್

09:29 PM May 18, 2021 | Team Udayavani |

ದಾವಣಗೆರೆ: ಜಿಲ್ಲೆಯಲ್ಲಿ ಮಂಗಳವಾರ 187 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.   ಈ ಮೂಲಕ ಈವರೆಗೆ ಜಿಲ್ಲೆಯಲ್ಲಿ 29576 ಜನರು ಗುಣಮುಖರಾಗಿದ್ದಾರೆ.

Advertisement

ಮಂಗಳವಾರ ಜಿಲ್ಲೆಯಲ್ಲಿ 594 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಾಲ್ವರು‌ ಮೃತಪಟ್ಟಿದ್ದು ಇವರಲ್ಲಿ ಮೂವರು ಪುರುಷರು, ಓರ್ವ ಮಹಿಳೆ ಸೇರಿದ್ದಾರೆ. ಎಲ್ಲರೂ 40 ವರ್ಷ ಮೇಲ್ಪಟ್ಟವರಾಗಿದ್ದಾರೆ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 92, ಹರಿಹರದಲ್ಲಿ  31, ಜಗಳೂರಿನಲ್ಲಿ 7, ಚನ್ನಗಿರಿಯಲ್ಲಿ 16, ಹೊನ್ನಾಳಿಯಲ್ಲಿ  32 ಹಾಗೂ ಹೊರ ಜಿಲ್ಲೆಯ 9 ಜನರು ಒಳಗೊಂಡಂತೆ 187 ಜನರು ಗುಣಮುಖರಾಗಿದ್ದಾರೆ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 236, ಹರಿಹರದಲ್ಲಿ 96, ಜಗಳೂರಿನಲ್ಲಿ 78, ಚನ್ನಗಿರಿ ಯಲ್ಲಿ 61, ಹೊನ್ನಾಳಿಯಲ್ಲಿ  101 ಹಾಗೂ ಹೊರ ಜಿಲ್ಲೆಯ 22 ಜನ ಒಳಗೊಂಡಂತೆ 594 ಜನರಲ್ಲಿ ಹೊಸದಾಗಿ ಕೊರೊನಾ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು  4447ಸಕ್ರಿಯ ಪ್ರಕರಣಗಳಿವೆ. ಈವರೆಗೆ ಕೊರಾನಾದಿಂದ 319 ಜನರು ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next