Advertisement

ಬಿಜೆಪಿ-ಟಿಎಂಸಿ ಘರ್ಷಣೆ: 19 ಮಂದಿಗೆ ಗಾಯ;ನಿಷೇಧಾಜ್ಞೆ ಜಾರಿ

03:13 PM Nov 19, 2021 | Team Udayavani |

ಖೋವೈ : ತ್ರಿಪುರಾದ ಖೋವೈ ಜಿಲ್ಲೆಯ ತೆಲಿಯಮುರಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಬೆಂಬಲಿಗರ ನಡುವೆ ಭಾರಿ ಘರ್ಷಣೆಗೆ ನಡೆದು ಕನಿಷ್ಠ 19 ಮಂದಿ ಗಾಯಗೊಂಡಿದ್ದು, ಈ ಪ್ರದೇಶದಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

Advertisement

ರಾಜ್ಯದಲ್ಲಿ ಪೌರ ಸಂಸ್ಥೆಗಳ ಚುನಾವಣೆಗೆ ಕೆಲವು ದಿನಗಳ ಮೊದಲು ಈ ಘರ್ಷಣೆ ನಡೆದಿದೆ.

ಗಾಯಗೊಂಡವರಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯೂ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ತೆಲಿಯಮುರಾ ಪುರಸಭೆಯ ಹಲವು ವಾರ್ಡ್ ಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬುಧವಾರ ರಾತ್ರಿ 9:30 ರ ಸುಮಾರಿಗೆ ಕಲಿಟಿಲಾ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ಬಿಜೆಪಿ ಕಚೇರಿ ಬಳಿ ಬಂದಾಗ ಘರ್ಷಣೆ ಆರಂಭವಾಗಿದೆ ಎಂದು ಸಹಾಯಕ ಪೊಲೀಸ್ ಮಹಾನಿರೀಕ್ಷಕ ಸುಬ್ರತಾ ಚಕ್ರವರ್ತಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next