Advertisement

ಲಾಕ್‌ಡೌನ್‌ ಮಧ್ಯೆಯೂ 2.30 ಲಕ್ಷ ಮೆ. ಟನ್‌ ಸರಕು ಸಾಗಣೆ

01:32 PM Jul 29, 2020 | mahesh |

ಮಹಾನಗರ: ಕೋವಿಡ್ ಲಾಕ್‌ಡೌನ್‌ ಸಮಯದಲ್ಲಿ ಸುರಕ್ಷಿತ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಕಾರವಾರ ಹಾಗೂ ಹಳೆ ಮಂಗಳೂರು ಬಂದರಿನಿಂದ 3 ತಿಂಗಳುಗಳಲ್ಲಿ 2.30 ಲಕ್ಷ ಮೆಟ್ರಿಕ್‌ ಟನ್‌ ಸರಕುಗಳನ್ನು ಲಕ್ಷದ್ವೀಪಕ್ಕೆ ಕಳುಹಿಸಲಾಗಿದ್ದು, ಇದರಿಂದ ಬಂದರು ಇಲಾಖೆ ಒಟ್ಟು 5.20 ಕೋಟಿ ರೂ. ಮೊತ್ತದ ಆದಾಯ ಗಳಿಸಲಾಗಿದೆ.

Advertisement

ಕೇಂದ್ರ ಸರಕಾರ, ಕೇಂದ್ರ ನೌಕಾಯಾನ ಮಂತ್ರಾಲಯ, ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಡೈರೆಕ್ಟರ್‌ ಜನರಲ್‌ ಆಫ್‌ ಶಿಪ್ಪಿಂಗ್‌ ಅವರು ಸೂಚಿಸಿದ ಸುರಕ್ಷೆ ಕ್ರಮಗಳನ್ನು ಅನುಸರಿಸಿ ಕನಿಷ್ಠ ಕಾರ್ಮಿಕರನ್ನು ಬಳಸಿಕೊಂಡು ಮಂಗಳೂರಿನಿಂದ ನೌಕೆಗಳಲ್ಲಿ ಲಕ್ಷದ್ವೀಪಕ್ಕೆ ಅಕ್ಕಿ, ತರಕಾರಿ ಮೊದ ಲಾದ ಆಹಾರ ಸಾಮಗ್ರಿಗಳನ್ನು ರವಾನಿಸಲಾಗಿದೆ. ಸಾಮಾನ್ಯವಾಗಿ ಲಕ್ಷದ್ವೀಪ ನಿವಾಸಿಗಳು ತಿಂಗಳಿಗೊಮ್ಮೆ ಅಥವಾ ತಿಂಗಳಿಗೆ ಎರಡು ಬಾರಿ ಹಡಗಿನಲ್ಲಿ ಬಂದು ಅಗತ್ಯ ವಸ್ತುಗಳನ್ನು ಮಂಗಳೂರಿನ ಮಾರುಕಟ್ಟೆಗಳಲ್ಲಿ ಖರೀದಿಸಿ ವಾಪಸಾಗುತ್ತಿದ್ದರು. ಆದರೆ ಕೊರೊನಾ ಲಾಕ್‌ಡೌನ್‌ ಆರಂಭವಾದ ತತ್‌ ಕ್ಷಣ ಹಡಗು ಸಂಚಾರವನ್ನು ಕೂಡ ಸ್ಥಗಿತಗೊಳಿಸಲು ಜಿಲ್ಲಾಡಳಿತ ಸೂಚಿಸಿತ್ತು. ಅನಂತರ ನೌಕೆಗಳಲ್ಲಿ ಲಕ್ಷದ್ವೀಪಕ್ಕೆ ಆಹಾರ ಸಾಮಗ್ರಿ ಸಾಗಿಸಲಾಯಿತು.

ಮೂಲಗಳ ಪ್ರಕಾರ, ಲಾಕ್‌ಡೌನ್‌ ಅವಧಿಯಲ್ಲಿಯೂ ಮಂಗಳೂರಿನಿಂದ ಆಹಾರ ನಿಗಮದ ಗೋದಾಮಿನಿಂದ 10,000 ಟನ್‌ಗೂ ಅಧಿಕ ಅಕ್ಕಿ, ಹಲವು ಟನ್‌ಗೂ ಅಧಿಕ ಸಕ್ಕರೆಯನ್ನು ಲಕ್ಷದ್ವೀಪಕ್ಕೆ ಕಳುಹಿಸಿಕೊಡಲಾಗಿದೆ. ಸಾವಿರಾರು ಟನ್‌ಗಳಷ್ಟು ಇತರ ಆಹಾರ ಸಾಮಗ್ರಿಗಳು ರವಾನೆಯಾಗಿವೆ.

ಹೂಳು ತುಂಬಿ ಸಂಚಾರ ಸಂಕಷ್ಟ
ಇಲ್ಲಿ ಪ್ರಸ್ತುತ ಲಕ್ಷದ್ವೀಪದೊಂದಿಗೆ ಮಾತ್ರ ಸರಕು ಸಾಗಾಟ ವ್ಯವಹಾರ ನಡೆಯುತ್ತಿದೆ. ಸುಮಾರು 2,000ದಿಂದ 2,500 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಯಾಂತ್ರೀಕೃತ ನೌಕೆಗಳು ಮಾತ್ರ ಸಂಚರಿಸುತ್ತಿವೆ. ಹಲವು ವರ್ಷಗಳ ಹಿಂದೆ ಹಿಂದೆ 4,500ರಿಂದ 5,000 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಸರಕು ಹಡಗುಗಳು ಗುಜರಾತ್‌ನಿಂದ ಸೋಡಾ ಪುಡಿ ಸರಕು ಹೊತ್ತು ಬರುತ್ತಿದ್ದವು.

ದಾಖಲೆಯ ಆದಾಯ ಗಳಿಕೆ
ಲಾಕ್‌ಡೌನ್‌ ಸಮಯದಲ್ಲಿಯೂ ಕಾರವಾರ ಹಾಗೂ ಹಳೆ ಮಂಗಳೂರು ಬಂದರುಗಳಿಂದ 2.30 ಲಕ್ಷ ಮೆಟ್ರಿಕ್‌ ಟನ್‌ ಸರಕುಗಳನ್ನು ಸಾಗಾಟ ನಡೆಸಿ 3 ತಿಂಗಳುಗಳಲ್ಲಿ ಒಟ್ಟು 5.20 ಕೋಟಿ ರೂ. ಮೊತ್ತದ ಆದಾಯ ಗಳಿಸಲಾಗಿದೆ. ಇದು ಉಳಿದ ಸಮಯಕ್ಕೆ ಹೋಲಿಸಿದರೆ ದಾಖಲೆ.
 - ಕೋಟ ಶ್ರೀನಿವಾಸ ಪೂಜಾರಿ, ಸಚಿವರು, ಬಂದರು ಇಲಾಖೆ

Advertisement
Advertisement

Udayavani is now on Telegram. Click here to join our channel and stay updated with the latest news.

Next