Advertisement

ತಪ್ಪಿಸಿಕೊಳ್ಳಬಾರದೆಂದು ಮಕ್ಕಳನ್ನು ಸರಪಳಿಯಲ್ಲಿ ಕಟ್ಟಿದ ಮದರಸಾದ ಮೌಲಾನಾ

10:54 AM May 28, 2022 | Team Udayavani |

ಲಕ್ನೋ: ಮದರಸಾದಿಂದ ಓಡಿಹೋಗದಂತೆ ತಡೆಯಲು ಇಬ್ಬರು ಹುಡುಗರ ಕಾಲುಗಳನ್ನು ಸರಪಳಿಯಲ್ಲಿ ಮೌಲಾನಾ ಕಟ್ಟಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.

Advertisement

ಸ್ಥಳೀಯರೊಬ್ಬರು ವಿಡಿಯೋ ಮಾಡಿ ಪೊಲೀಸರಿಗೆ ಕಳುಹಿಸಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಮಕ್ಕಳನ್ನು ಬಿಡುಗಡೆಗೊಳಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈತನ್ಮಧ್ಯೆ ಮೌಲಾನಾ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಲು ಬಯಸುವುದಿಲ್ಲ ಎಂದು ಬಾಲಕರ ಪೋಷಕರು ಲಿಖಿತ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಯೋಜನೆಗಳ ಮೇಲೆ ಮೋದಿ ಡ್ರೋನ್‌ ಕಣ್ಣು; ಯೋಜನೆಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಅನುಕೂಲ

ಮೌಲಾನಾ ಮಕ್ಕಳೊಂದಿಗೆ ಕಟ್ಟುನಿಟ್ಟಾಗಿ ವರ್ತಿಸುವಂತೆ ಹೇಳಿದ್ದು, ಈ ಹಿಂದೆ ಹಲವು ಬಾರಿ ಓದು ತಪ್ಪಿಸಿಕೊಳ್ಳಲು ಓಡಿಹೋಗಲು ಯತ್ನಿಸಿದ್ದರು ಎಂದು ಪೋಷಕರು ತಿಳಿಸಿದ್ದಾರೆ.

Advertisement

ಓದಲು ಬಾರದ ಕಾರಣ ಓಡಿಹೋಗಲು ಯತ್ನಿಸಿರುವುದಾಗಿ ಮಕ್ಕಳು ತಿಳಿಸಿದ್ದಾರೆ. ಒಬ್ಬ ಹುಡುಗನು ಓದುವುದನ್ನು ತಪ್ಪಿಸಲು ಶೌಚಾಲಯದಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next